ಬಸ್ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು !
ಶಿಕಾರಿಪುರ : ಬಸ್ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ.
ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾನೆ. ಈ ವೇಳೆ ಬಸ್ನಲ್ಲಿದ್ದ ಶುಂಠಿ ಚೀಲಕ್ಕೆ ಎಡವಿ ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.
ವಿಠಲ ನಗರ ಗ್ರಾಮದ ಅಜ್ಜ ನಾಗಪ್ಪನವರ ಮನೆಯಲ್ಲಿದ್ದ ಆದಿತ್ಯ ಶಿಕಾರಿಪುರ ಶಾಲೆಗೆ ಹೋಗುತ್ತಿದ್ದ. ತಂದೆ, ತಾಯಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಆದಿತ್ಯ ಸಾವಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು ತೀವ್ರ ಸಂತಾಪ ಸೂಚಿಸಿದ್ದಾರೆ.