ಬಾರ್‌ನಲ್ಲಿ ನಡೆದಿದ್ದ ಕ್ಯಾಶಿಯರ್ ಕೊಲೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

0 226

ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಪೋಲಿಸರು ಗುಂಡು ಹಾರಿಸಿದ ಘಟನೆ ನಗರದ ಹೊರ ವಲಯದ ಮುದ್ದಿನ ಕೊಪ್ಪ ಬಳಿ ನಡೆದಿದೆ.

ಹಲ್ಲೆಗೊಳಗಾದ ಪೊಲೀಸರು.

ಆಯನೂರು ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು.‌ ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು.

ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಈ ವೇಳೆ ತುಂಗಾನಗರ ಪಿಎಸ್‌ಐ ರಾಜುರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್‌ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್‌ ಇನ್ಸ್‌ಪೆಕ್ಟರ್‌ ರಾಜು ರೆಡ್ಡಿ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave A Reply

Your email address will not be published.

error: Content is protected !!