ಬಿಎಸ್‌ವೈ ಕುಟುಂಬದಿಂದ ಶ್ರೀ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ

0 144

ಶಿಕಾರಿಪುರ : ಶಿಕಾರಿಪುರದ ಇತಿಹಾಸ ಪ್ರಸಿದ್ದ ಆರಾಧ್ಯ ದೈವ ಶ್ರೀ ಹುಚ್ಚರಾಯಸ್ವಾಮಿಯ ಮಹಾರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳು ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರದಿಂದಾಗಿ ರೈತರು ಜನ ಜಾನುವಾರುಗಳು ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ಸ್ವಾಮಿಯು ಉತ್ತಮ ಮಳೆಯನ್ನು ಕರುಣಿಸಿ ನಾಡಿನ ಹಾಗೂ ಲೋಕದ ಸಕಲ ಜೀವರಾಶಿಗಳನ್ನು ಸಂರಕ್ಷಿಸಬೇಕೆಂದು ಪ್ರಾರ್ಥಿಸಿದರು.
ಕಳೆದ 10 ವರ್ಷಗಳಿಂದ ರಾಷ್ಟ್ರವನ್ನು ಸದೃಢವಾಗಿ ಮುನ್ನಡೆಸುತ್ತಿರುವ ಹಾಗೂ ವಿಶ್ವದ ಮುಂದುವರೆದ ರಾಷ್ಟ್ರಗಳಲ್ಲಿ ಭಾರತವನ್ನು ಮುಂಚೂಣಿಗೆ ತೆಗೆದುಕೊಂಡು ಹೋಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದಿಗಿಂತಲೂ ಅಭೂತ ಪೂರ್ವ ಗೆಲುವನ್ನು ತಂದು ಕೊಡಬೇಕೆಂದು ಯಡಿಯೂರಪ್ಪ ಹಾಗೂ ಅವರ ಕುಟುಂಬ ಶ್ರೀ ಹುಚ್ಚರಾಯಸ್ವಾಮಿಯಲ್ಲಿ ಬೇಡಿಕೊಂಡಿತು.


ಈ ಸಂದರ್ಭದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ರಘುಪತಿಭಟ್, ಬಳಿಗಾರ್, ವೀರಣ್ಣಗೌಡ, ಇತರರು ಉಪಸ್ಥಿತರಿದ್ದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ರಾಘವೇಂದ್ರರವರು ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಜಯ ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಪ್ರಚಾರ ಮಾಡುತ್ತಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.
– ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಜನತೆ ಅಭಿವೃದ್ದಿ ಕಾರ್ಯಗಳನ್ನು ನೋಡಿ ಮತವನ್ನು ನೀಡುತ್ತಾರೆ. ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ಈಶ್ವರಪ್ಪನವರ ಆಶೀರ್ವಾದ ನನಗೆ ಸಿಕ್ಕಿತ್ತು. ಆದರೆ ಈ ಬಾರಿ ಅವರ ಆಶೀರ್ವಾದ ಇಲ್ಲವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾನು ಗೆಲುವು ಸಾಧಿಸಿ ಮೋದಿ ಪರವಾಗಿ ಕೈ ಎತ್ತಬೇಕಾಗಿದೆ. ಆದರೆ ಈಶ್ವರಪ್ಪನವರ ಹೇಳಿಕೆ ನಗೆಪಾಟಲಿಗೆ ಈಡಾಗಿದೆ. ಪ್ರಬುದ್ದ ಮತದಾರರು ಈ ಬಗ್ಗೆ ಸೂಕ್ತ ಉತ್ತರ ನೀಡುತ್ತಾರೆ.
– ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ

ಜನತೆ ಅಭಿವೃದ್ದಿ ಕಾರ್ಯಗಳನ್ನು ನೋಡಿ ಮತವನ್ನು ನೀಡುತ್ತಾರೆ. ಹಿಂದಿನ ಎಲ್ಲಾ ಚುನಾವಣೆಗಳಲ್ಲಿ ಈಶ್ವರಪ್ಪನವರ ಆಶೀರ್ವಾದ ನನಗೆ ಸಿಕ್ಕಿತ್ತು. ಆದರೆ ಈ ಬಾರಿ ಅವರ ಆಶೀರ್ವಾದ ಇಲ್ಲವಾಗಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ನಾನು ಗೆಲುವು ಸಾಧಿಸಿ ಮೋದಿ ಪರವಾಗಿ ಕೈ ಎತ್ತಬೇಕಾಗಿದೆ. ಆದರೆ ಈಶ್ವರಪ್ಪನವರ ಹೇಳಿಕೆ ನಗೆಪಾಟಲಿಗೆ ಈಡಾಗಿದೆ. ಪ್ರಬುದ್ದ ಮತದಾರರು ಈ ಬಗ್ಗೆ ಸೂಕ್ತ ಉತ್ತರ ನೀಡುತ್ತಾರೆ.
– ಬಿ.ವೈ.ರಾಘವೇಂದ್ರ, ಬಿಜೆಪಿ ಅಭ್ಯರ್ಥಿ

Leave A Reply

Your email address will not be published.

error: Content is protected !!