ಶಿವಮೊಗ್ಗ : ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾವು ಕೂಡ ಶ್ರೀರಾಮ ಭಕ್ತರು ಆದರೆ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡೋದಕ್ಕೆ ಹೊರಟಿದ್ದಾರೆ.
ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತಿವೆ ಹೊರತು ಶ್ರೀ ರಾಮನನ್ನು ವಿರೋಧಿಸಿಲ್ಲ. ನಾನು ಕೂಡ ಶ್ರೀರಾಮನ ಭಕ್ತ ಆದ್ದರಿಂದ ನಾನು ಹೋಗಿ ನೋಡಿಕೊಂಡು ಬರುತ್ತೇನೆ ಜ. 22 ರಂದು ರಾಜ್ಯದಲ್ಲಿ ನಮ್ಮ ಎಲ್ಲ ಕಾರ್ಯಕರ್ತರು ಎಲ್ಲ ಶ್ರೀ ರಾಮನ ಮಂದಿರಕ್ಕೆ ಪೂಜೆ ಸಲ್ಲಿಸುತ್ತಾರೆ. ಬಿಜೆಪಿಯವರು ಕೇವಲ ರಾಜಕೀಯ ಮಾಡುವವರು ಎಂದು ವಾಗ್ದಾಳಿ ನಡೆಸಿದರು.
ನಮ್ಮ ಐದನೇ ಗ್ಯಾರಂಟಿ ಯುವನಿಧಿ ಇದನ್ನ ನಿರುದ್ಯೋಗ ಪದವೀಧರರಿಗೆ ನಿರುದ್ಯೋಗಿ ಹೋಲ್ಡರ್ಸ್ ಗೆ ಪದವೀಧರರಿಗೆ 3000, ಡಿಪ್ಲೋಮೋ ಹೋಲ್ಡರ್ಗೆ ಒಂದೂವರೆ ಸಾವಿರ ರೂಪಾಯಿ ತಿಂಗಳಿಗೆ ಎರಡು ವರ್ಷದವರೆಗೆ ಕೊಡುತ್ತೇವೆ. ಈ ಭತ್ಯೆ ಕೊಡುವುದರ ಜೊತೆಗೆ ಅವರಿಗೆ ಕೌಶಲ್ಯ ತರಬೇತಿ ಕೂಡ ನೀಡುತ್ತೇವೆ. ಎರಡು ವರ್ಷದಲ್ಲಿ ಅವರಿಗೆ ಕೆಲಸ ಸಿಕ್ಕರೆ ಅವರಿಗೆ ಕೊಡುವುದಿಲ್ಲ. ಸರ್ಕಾರಿ ಸೇವೆ ಸಲ್ಲಿಸಿರಬಹುದು ಅಥವಾ ಸ್ವಯಂ ಉದ್ಯೋಗ ಮಾಡುವುದು ಎರಡು ವರ್ಷದಲ್ಲಿ ಕೆಲಸ ಸಿಕ್ಕರೆ ಅವರಿಗೆ ಕೊಡುವುದಿಲ್ಲ ಒಂದು ವೇಳೆ ಸಿಗದಿದ್ದರೆ ಎರಡು ವರ್ಷದ ಪೂರ್ಣಾವಧಿ ಕೊಡುತ್ತೇವೆ.
ಇವತ್ತು ಉದ್ಯೋಗ ಸಿಗಬೇಕಾದರೆ ಯಾವ ರೀತಿ ಡಿಮ್ಯಾಂಡ್ ಇದೆ. ಆ ತರಬೇತಿ ಕೂಡ ಕೊಡುತ್ತೇವೆ ತರಬೇತಿಯೂ ಎಷ್ಟು ಅವಧಿಯವರಿಗೆ ಇರುತ್ತದೆ ಎಂದು ಇಲಾಖೆಗೆ ಸಂಬಂಧಿಸಿದಾಗಿದೆ. ಗ್ಯಾರಂಟಿ ಯೋಜನೆ ನಾವು ಕೊಡುತ್ತಿರುವುದರಿಂದ ಬಿಜೆಪಿಗೆ ಹೊಟ್ಟೆ ಉರಿ ಶುರುವಾಗಿದೆ. ಒಂದು ಕೋಟಿ 18 ಲಕ್ಷ ಮಹಿಳಾ ಯಜಮಾನಿಯರಿಗೆ ತಿಂಗಳಿಗೆ 2000 ಕೊಡುತ್ತಿದ್ದೇವೆ.ಆಮೇಲೆ ಅವರು ಹೇಳೋದನ್ನ ಕೇಳಬೇಡಿ ನಾನು ಹೇಳಿದ್ದನ್ನು ಕೇಳಬೇಡಿ ವೆರಿಫೈ ಮಾಡಿ.130 ಕೋಟಿ ಎಲ್ಲಾ ಜಾತಿಯ ಮಹಿಳೆಯರು ಧರ್ಮದವರು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವುದು ಸುಳ್ಳ ಎಂದು ಪ್ರಶ್ನಿಸಿದರು.
200 ಯೂನಿಟ್ ವರೆಗೆ ಫ್ರೀಯಾಗಿ ವಿದ್ಯುತ್ ಕೊಡುತ್ತಿರುವುದು ಸುಳ್ಳ? ಒಂದು ಕೋಟಿ ಐವತ್ತೊಂದು ಲಕ್ಷ ಜನರಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದೇವೆ. ಅನ್ನಭಾಗ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ 170 ರೂಪಾಯಿ ಕೊಡುತ್ತಿರುವುದು ಸುಳ್ಳ? ಈ ಯೋಜನೆಗಳು ಚುನಾವಣೆಗೋಸ್ಕರ ಮಾಡಿರುವುದಲ್ಲ. ವೋಟಿಗೋಸ್ಕರ ಮಾಡಿದ್ದು ಅಲ್ಲ ಇದು ಮಾಡಿರುವುದು ಬಡವರಿಗೆ ಮಾಧ್ಯಮ ವರ್ಗದವರಿಗೆ ಎಂದು ತಿಳಿಸಿದರು.
ಆರ್ಥಿಕವಾಗಿ ಸಮಾಜಕವಾಗಿ ಶಕ್ತಿ ತುಂಬಬೇಕು ಅವರು ಮುಖ್ಯವಾಹಿನಿಗೆ ಬರಬೇಕಂತ ಮಾಡಿದ್ದೇವೆ. ಒಂದು ಕುಟುಂಬಕ್ಕೆ ಸುಮಾರು ನಾಲ್ಕರಿಂದ ಐದು ಸಾವಿರ ರೂಪಾಯಿ ತಿಂಗಳಿಗೆ ನಗದು ಹಣ ಸೇರುತ್ತಿದೆ. ವರ್ಷಕ್ಕೆ 48ರಿಂದ 50 ಸಾವಿರ ರೂಪಾಯಿ ಒಂದು ಕುಟುಂಬಕ್ಕೆ ಸೇರುತ್ತಿದೆ ಎಂದು ಅವರು ತಿಳಿಸಿದರು.
ಬೆಲೆ ಏರಿಕೆಯಾಗಿದೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ,ಆಹಾರ ಪದಾರ್ಥಗಳ ಬೆಲೆ ಕೂಡ ಏರಿಕೆಯಾಗಿದೆ. ಇದಕ್ಕೆಲ್ಲ ಬಡವರಿಗೆ ಶಕ್ತಿ ಬೇಕಲ್ಲ? ಬಡವರಿಗೆ ಕೊಂಡುಕೊಳ್ಳುವ ಶಕ್ತಿ ಬೇಕಲ್ಲ ಆದ ಕಾರಣ ಇಂತಹ ಯೋಜನೆಗಳನ್ನು ನಾವು ಬಡವರಿಗೆ ಹಾಗೂ ಮಧ್ಯಮ ವರ್ಗಕ್ಕೆ ಜಾರಿಗೆ ಮಾಡಿದ್ದೇವೆ ಎಂದರು.
21ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಲ್ಲಾ ಕಾರ್ಯಕರ್ತರು ಮಂಗಳೂರಲ್ಲಿ ಬಂದು ಭಾಗವಹಿಸಬೇಕು ಎಲ್ಲಾ ರಾಜ್ಯದ ಎಲ್ಲ ಕಾರ್ಯಕರ್ತರು ಚಿಕ್ಕವರು ದೊಡ್ಡವರು ಎಲ್ಲರೂ ಮಂಗಳೂರಲ್ಲಿ ಸ್ವಂತ ಇಚ್ಛೆಯಿಂದ ಆಗಮಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…