Categories: Shivamogga

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರನ್ನು ಸೋಲಿಸುವುದೇ ಈಶ್ವರಪ್ಪನವರ ಪ್ರಥಮ ಆದ್ಯತೆ ; ಹೊಸ ಬಾಂಬ್ ಸಿಡಿಸಿದ ಆಯನೂರು

ಶಿವಮೊಗ್ಗ: ತಮ್ಮ ಮಾನಸ ಪುತ್ರ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರನ್ನು ಸೋಲಿಸುವುದೇ ಕೆ.ಎಸ್. ಈಶ್ವರಪ್ಪನವರ ಪ್ರಥಮ ಆದ್ಯತೆಯಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ತಮಗೆ ಸೀಟು ಸಿಗಬೇಕೆಂದು ಪ್ರಯತ್ನಿಸಿದರು. ಅದು ಆಗದಿದ್ದ ಕಾಲಕ್ಕೆ ತಮ್ಮ ಮಗನಿಗಾದರೂ ಸಿಗಲಿ ಎಂದು ಹಂಬಲಿಸಿದರು. ಆದರೆ ಅದೂ ಸಾಧ್ಯವಾಗದಿದ್ದಾಗ ತಮ್ಮ ಮಾನಸಪುತ್ರನಂತಿರುವ ಚನ್ನಬಸಪ್ಪನವರಿಗೆ ಟಿಕೆಟ್ ಕೊಡಿಸಿದ್ದಾರೆ. ಹಾಗೆ ಕೊಡಿಸಿದ ಮೇಲೂ ಅವರನ್ನು ಗೆಲ್ಲಿಸಬೇಕೆಂಬ ಮನಸ್ಸು ಅವರಿಗಿಲ್ಲ. ಏಕೆಂದರೆ ಅಕಸ್ಮಾತ್ ಚನ್ನಬಸಪ್ಪ ಗೆದ್ದರೆ ತಮ್ಮ ಮಗನ ರಾಜಕೀಯ ಜೀವನವೇ ಮುಗಿದುಹೋಗುತ್ತದೆ ಎನ್ನುವ ಆತಂಕ ಈಶ್ವರಪ್ಪರನ್ನು ಕಾಡತೊಡಗಿದೆ. ಹಾಗಾಗಿ ಅವರು ಮೇಲುನೋಟಕ್ಕೆ ಬಿಜೆಪಿಯಲ್ಲಿದ್ದರೂ ಕೂಡ ಶಿವಮೊಗ್ಗ ಕ್ಷೇತ್ರದ ಮಟ್ಟಿಗೆ ಚನ್ನಬಸಪ್ಪ ಅವರನ್ನು ಸೋಲಿಸಲು ತಮ್ಮದೇ ಆದ ತಂಡವನ್ನು ಕಟ್ಟಿಕೊಂಡು ತೆರೆಮರೆಯಲ್ಲಿ ಇನ್ನಿಲ್ಲದ ಪ್ರಯತ್ನ ಪಡುತ್ತಾರೆ. ಇದು ನನ್ನ ಮಾತಲ್ಲ. ಸಾರ್ವಜನಿಕರ ಮಾತನ್ನೇ ನಾನು ಹೇಳಿದ್ದೇನೆ ಎಂದು ಆಯನೂರು ಗಂಭೀರ ಆರೋಪ ಮಾಡಿದರು.


ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೆಚ್.ಸಿ ಯೋಗೇಶ್ ಕೂಡ ಒಂದು ರೀತಿಯಲ್ಲಿ ಈಶ್ವರಪ್ಪನವರ ನೆರಳೇ ಆಗಿದ್ದಾರೆ. ಈಶ್ವರಪ್ಪ ಅವರು ಅವರದೇ ವಾರ್ಡಿನಲ್ಲಿ ಕಾಂಗ್ರೆಸ್‌ನ ಹೆಚ್.ಸಿ. ಯೋಗೇಶ್ ಅವರನ್ನು ಮೂರು ಬಾರಿ ಗೆಲ್ಲಿಸಿದ್ದಾರೆ. ಮತ್ತು ದೆಹಲಿ ಮಟ್ಟದಲ್ಲಿ ಪ್ರಯತ್ನಿಸಿ ಯೋಗೇಶ್ ಅವರಿಗೆ ಟಿಕೆಟ್ ಸಿಗುವಂತೆ ಮಾಡಿದ್ದಾರೆ. ಇದೊಂದು ರಾಜಕೀಯ ತಂತ್ರವೂ ಹಾಗೂ ಕುತಂತ್ರವೂ ಆಗಿದೆ ಎಂದು ನೇರ ಆರೋಪ ಮಾಡಿದರು.


ಕಾಂಗ್ರೆಸ್‌ನವರು ಲಿಂಗಾಯತ ಮತಗಳು ಕ್ರೋಡೀಕರಣವಾಗಬೇಕೆಂದುಕೊಂಡಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ನಮ್ಮದು ಜತ್ಯತೀತ ಪಕ್ಷ. ಶಾಂತಿಯನ್ನು ಬಯಸುವುದೇ ನಮ್ಮ ಗುರಿ. ಶಾತಿ ನೆಮ್ಮದಿಯನ್ನು ಬಯಸುವ ಎಲ್ಲರೂ ನಮ್ಮನ್ನು ಬೆಂಬಲಿಸುತ್ತಾರೆ. ಗೆಲುವು ನಮಗೆ ಖಚಿತ ಎಂದರು.


ಜೆಡಿಎಸ್ ಕಾನೂನು ವಿಭಾಗದ ರಾಜಧ್ಯಕ್ಷ ಎ.ಪಿ. ರಂಗನಾಥ್ ಮಾತನಾಡಿ, ವಕೀಲರು ಈ ಬಾರಿ ಆಯನೂರು ಮಂಜುನಾಥ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಆಡಳಿತ ಸರ್ಕಾರ ವಕೀಲರ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ಸಮಸ್ಯೆಗಳನ್ನು ಬಗೆಹರಿಸಲಿಲ್ಲ. ಆದ್ದರಿಂದ ನಾವು ಈ ಬಾರಿ ನಮ್ಮ ಪರವಾಗಿ ಧ್ವನಿ ಎತ್ತಿರುವ ಆಯನೂರು ಮಂಜುನಾಥ್ ಅವರನ್ನು ಗೆಲ್ಲಿಸಲು ನಿರ್ಧರಿಸಿದ್ದೇವೆ ಎಂದರು.


ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು. ಧರ್ಮಗಳ ಮಧ್ಯೆ ಸಾಮರಸ್ಯವಿರಬೇಕು. ನಮ್ಮ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಮತ್ತು ಆಯನೂರು ಮಂಜುನಾಥ್ ಅಂತಹವರ ಹಾಜರಾತಿ ಶಾಸನಸಭೆಯಲ್ಲಿ ಇರಬೇಕು. ಹಾಗಾಗಿಯೇ ನಾವು ಜೆಡಿಎಸ್ ಅನ್ನು ಗೆಲ್ಲಿಸುತ್ತೇವೆ. ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಾನಗಳನ್ನು ಪಡೆಯುತ್ತೇವೆ ಎಂದರು.


ಪತ್ರಿಕಾ ಗೋಷ್ಠಿಯಲ್ಲಿ ಜೆಡಿಎಸ್ ಜಿಧ್ಯಕ್ಷ ಎಂ. ಶ್ರೀಕಾಂತ್, ಮುಖಂಡ ಕೆ.ಬಿ. ಪ್ರಸನ್ನಕುಮಾರ್ ಪ್ರಮುಖರಾದ ಅನಿಲ್, ರಮೇಶ್, ನಿರಂಜನ, ಸತ್ಯನಾರಾಯಣ ಮುಂತಾದವರಿದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

11 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

12 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

12 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

14 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

16 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

18 hours ago