Categories: Shivamogga

ಬಿಜೆಪಿ ಮಾಜಿ ಸಿಎಂ ಸೇರಿದಂತೆ 30ಕ್ಕೂ ಹೆಚ್ಚು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ; ಆಯನೂರು ಮಂಜುನಾಥ್

ಶಿವಮೊಗ್ಗ: ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರು ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.


ಅವರು ಇಂದು ಕೆಪಿಸಿಸಿ ವಕ್ತಾರರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ಆಪರೇಷನ್ ಹಸ್ತ ಅಲ್ಲ. ಆದರೆ ಬಿಜೆಪಿಯ ಮಾಜಿ ಮುಖ್ಯಮಂತ್ರಿಯೂ ಸೇರಿದಂತೆ ಅನೇಕ ಶಾಸಕರು, ಮುಖಂಡರು ಕಾಂಗ್ರೆಸ್‌ಗೆ ಬರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಮುಖಂಡರ ಮನೆಗಳಿಗೂ ತೆರಳಿದ್ದಾರೆ. ಸದ್ಯದಲ್ಲಿಯೇ ಈ ವಿಷಯ ಬಹಿರಂಗವಾಗಲಿದೆ ಎಂದರು.


ರಾಜ್ಯದಲ್ಲಿ ಬಿಜೆಪಿ ಆಂತರಿಕ ಸಮಸ್ಯೆಯಿಂದ ಬಳಲುತ್ತಿದೆ. ಸಾಂವಿಧಾನಿಕ ಸ್ಥಾನವಾದ ಮೇಲ್ಮನೆ ಮತ್ತು ಕೆಳಮನೆಗಳಲ್ಲಿ ಇದುವರೆಗೂ ವಿಪಕ್ಷವಾದ ಬಿಜೆಪಿಗೆ ತನ್ನ ವಿಪಕ್ಷ ನಾಯಕರನ್ನು ಆಯ್ಕೆಮಾಡಿಕೊಳ್ಳುವ ಯೋಗ್ಯತೆ ಇಲ್ಲದಂತಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ರನ್ನು ನೇಮಕ ಮಾಡಿಕೊಳ್ಳಲಾಗದ ಸ್ಥಿತಿಗೆ ಬಿಜೆಪಿ ತಲುಪಿದೆ ಎಂದರು.


 ಶಿವಮೊಗ್ಗದ ಒಂದು ಸಣ್ಣ ಬಡಾವಣೆಯಲ್ಲಿ ನಡೆದ ಗಲಾಟೆಯನ್ನು  ನಿಭಾಯಿಸುವಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಇದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಆದರೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ. ಅದಕ್ಕಾಗಿಯೇ ಈಗ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಲವತ್ತು ವರ್ಷದ ರಾಜಕೀಯ ಜೀವನದ ಅನುಭವ ಇರುವ ಅವರು ನಗರದಲ್ಲಿ ಶಾಂತಿ ಕದಡುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು   ಅವರಿಗೆ ಶೋಭೆಯಲ್ಲ. ರಾಜ್ಯದಲ್ಲಿ ಕಾವೇರಿ ನೀರಾವರಿ ಸಮಸ್ಯೆ ಇದೆ. ನೀರಾವರಿ ಸಚಿವರೂ ಆಗಿದ್ದ ಈಶ್ವರಪ್ಪ ಅವರು ಎಂದೆಂದಿಗೂ ನೀರಾವರಿ ಕುರಿತು ಮಾತನಾಡೇ ಇಲ್ಲ ಎಂದರು.


ಕಾವೇರಿ ವಿಷಯದಲ್ಲಿ ಈ ಹಿಂದೆ ಪ್ರಧಾನಿಯಾಗಿದ್ದ ವಾಜಪೇಯಿ ಅವರನ್ನು ಮಧ್ಯ ಪ್ರವೇಶಿಸುವಂತೆ ಮಾಡಿ ರಾಜ್ಯದ ಹಿತ ಕಾಪಾಡುವಲ್ಲಿ ಅಂದಿನ ಸಚಿವ ಅನಂತಕುಮಾರ್ ಶ್ರಮವಹಿಸಿದ್ದರು. ರಾಜ್ಯದ 26 ಬಿಜೆಪಿ ಸಂಸದರನ್ನಿಟ್ಟುಕೊಂಡು ಪ್ರಧಾನಮಂತ್ರಿಗಳನ್ನು ಕರೆತಂದು ಕಾವೇರಿ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವ, ರೈತರ ಹಿತ ಕಾಯುವ ಕೆಲಸ ಮಾಡದ ಈಶ್ವರಪ್ಪ ಬಾಯಿಗೆ ಬಂದAತೆ ಮಾತಾಡುವುದನ್ನು ನಿಲ್ಲಿಸಿ ರಾಜ್ಯದ ಹಿತದ ಜವಾಬ್ದಾರಿಯನ್ನು ನಿರ್ವಹಿಸಲಿ ಎಂದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗನ ಕೊಲೆಯಾಗಿದ್ದರೆ, ಡಿ.ಕೆ. ಶಿವಕುಮಾರ್ ಅವರ ತಮ್ಮನ ಕೊಲೆಯಾಗಿದ್ದರೆ ಎಂಬ ಬೇಜವಾಬ್ದಾರಿ ಮಾತುಗಳನ್ನು ಈಶ್ವರಪ್ಪ ನಿಲ್ಲಿಸಬೇಕು. ಸಾಂವಿಧಾನಿಕ ಹುದ್ದೆಯಲ್ಲಿಲ್ಲದಿದ್ದರೂ ಪೈಲಟ್ ವಾಹನದ ಮುಂದಿಟ್ಟುಕೊಂಡು ಓಡಾಡಲು ಯಾವ ಅರ್ಹತೆ ಇದೆ ? ಅಧಿಕಾರ ಕಳೆದುಕೊಂಡ ತಕ್ಷಣ ದುಬೈನಿಂದ ಬೆದರಿಕೆ ಕರೆಗಳು ಬರುತ್ತವೆ. ಆ ತನಿಖೆ ಎಲ್ಲಿಗೆ ಬಂತು? ಸೈರನ್ ಹೊಡ್ಕೊಂಡ್ ಹೋಗುವುದಕ್ಕಿಂತ ಸದ್ದಿಲ್ಲದೆ ಓಡಾಡೋದು ಒಳ್ಳೆಯದು. ಕತ್ತಿ ಕೊಡುವುದಿದ್ದರೆ ಬಿಜೆಪಿ ಮುಖಂಡರು ತಮ್ಮ ಮಕ್ಕಳ ಕೈಗೆ ಕತ್ತಿ ಕೊಟ್ಟು ಬೀದಿಗೆ ಬಿಡಲಿ, ಕಾನೂನು ಏನು ಮಾಡುತ್ತೆ  ಅನ್ನೋದು ಗೊತ್ತಾಗುತ್ತೆ ಎಂದ ಆಯನೂರು ಮಂಜುನಾಥ್ ಅವರ ಇಂತಹ ಸಣ್ಣತನದ ರಾಜಕಾರಣವನ್ನು ಬಿಡಬೇಕು ಎಂದು ಈಶ್ವರಪ್ಪ ಅವರಿಗೆ ಕಿವಿಮಾತು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್, ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್, ಮಾಧ್ಯಮ ಸಂಯೋಜಕ ಚಂದ್ರಭೂಪಾಲ್, ಮಹಾನಗರ ಪಾಲಿಕೆ ಸದಸ್ಯ ಧೀರರಾಜ್, ಮುಖಂಡರಾದ, ಐಡಿಯಲ್ ಗೋಪಿ, ಮಾಜಿ ನಗರಸಭಾ ಸದಸ್ಯ ಮುಕ್ತಿಯಾರ್ ಆಹಮ್ಮದ್, ಶಿ.ಜು ಪಾಶ, ಹಿರಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

17 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

21 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

23 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

24 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago