Categories: Shivamogga

ಬೆಂಗಳೂರಿನಿಂದ ಕುವೆಂಪು ವಿಮಾಣ ನಿಲ್ದಾಣಕ್ಕೆ ಬಂದಿಳಿದ ಪ್ರಥಮ ವಿಮಾನ | ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭ ; ಎಂ.ಬಿ.ಪಾಟೀಲ



ಶಿವಮೊಗ್ಗ : ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ನುಡಿದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://m.facebook.com/story.php?story_fbid=pfbid0LJQ2M6fpZjkpNgZqJySKvCfE9BnQXR3pVidor6noRaijFaKydbGiqVh245XcGWkel&id=100063707904382&mibextid=NnVzG8


ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನಯಾನ ಕಾರ್ಯಾಚರಣೆ ಮತ್ತು ಅಧಿಕೃತ ಜಾಲತಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಆಗಲಿದೆ ಎಂದರು.


ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ ₹500 ರುಪಾಯಿ ರಾಜ್ಯ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಸಚಿವರು ಘೋಷಿಸಿದರು.
779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‍ಬಸ್-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.
ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದ ಅವರು ರಾಜ್ಯ ಸರ್ಕಾರದಿಂದಲೇ ವಿಮಾನ ನಿಲ್ದಾಣ ನಿರ್ವಹಣೆ ಮಾಡುವ ಯೋಜನೆಯಿದ್ದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಥಮವಾಗಿ ನಿರ್ವಹಣೆ ಆರಂಭವಾಗಲಿದೆ. ಇದರಿಂದ ಸರ್ಕಾರಕ್ಕೆ ಆದಾಯ ಮತ್ತು ಆಸ್ತಿ ಉಳಿಯಲಿದೆ. ಈ ಕುರಿತು ಸಾಧಕ-ಬಾಧಕಗಳನ್ನು ತಿಳಿದು ಮುನ್ನಡೆಯುತ್ತೇವೆ. ಎಂದರು.
ರಸ್ತೆ-ರೈಲ್ವೆ-ಏರ್‍ವೇ ಇಂದ ಆರ್ಥಿಕ, ಔದ್ಯೋಗಿಕ ಬೆಳವಣಿಗೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ರೈತರ ಸಹಕಾರದೊಂದಿಗೆ ಕೈಗಾರಿಕೆಗಳನ್ನು ತರುವ ಉದ್ದೇಶ ಇದೆ ಎಂದರು.
ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುμÁ್ಠನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ಶ್ರಮಿಸಿದ ಎಲ್ಲ ಜನಪ್ರತಿನಿಧಿಗಳು ಮತ್ತು ಭೂಮಿ ನೀಡಿದ ರೈತರಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ನೆರವು ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಲಾಗುವುದು. ಹಾಗೂ ಜನಸಾಮಾನ್ಯರು, ಬಡವರು ವಿಮಾನ ನಿಲ್ದಾಣದಲ್ಲಿ ಹಾರಾಡುವ ವ್ಯವಸ್ಥೆ ಮಾಡುತ್ತೇವೆಂಬ ವಿಶ್ವಾಸ ಇದೆ ಎಂದ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆಂಬ ಭರವಸೆ ವ್ಯಕ್ತಿಪಡಿಸಿದರು.


ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಸಹ್ಯಾದ್ರಿ ನಗರಕ್ಕೆ ಲೋಹದ ಹಕ್ಕಿಯ ಆಗಮನ ಆಗಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಹಾಗೂ ಭೂಮಿ ನೀಡಿದ ರೈತರಿಗೆ ಧನ್ಯವಾದಗಳನ್ನು ತಿಳಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಬಹು ವರ್ಷಗಳ ವಿಮಾನ ನಿಲ್ದಾಣದ ಕನಸು ನಿಮ್ಮೆಲ್ಲರ ಬೆಂಬಲದಿಂದ ನನಸಾಗಿದೆ. ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಉತ್ತಮ ಅವಕಾಶಗಳು ತೆರೆದುಕೊಳ್ಳಲಿವೆ. ನಿಲ್ದಾಣದಲ್ಲಿ ರಾತ್ರಿ ನಿಲ್ದಾಣಕ್ಕೂ ವ್ಯವಸ್ಥೆ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಈ ನಿಲ್ದಾಣ ಅಂತರಾಷ್ಟ್ರೀಯ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ ಪಾಟೀಲ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ, ಸಂಸದದಾದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ವಿಮಾನಯಾನದ ಹೊಸ ಅಧ್ಯಾಯ ಆರಂಭವಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.
ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ.ಪಾಟೀಲ ಜತೆ ಸಚಿವ ಮಧು ಬಂಗಾರಪ್ಪ ಕೂಡ ಪ್ರಯಾಣಿಸಿದರು.


ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಪರವಾಗಿ ಇಬ್ಬರು ರೈತರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಮಾಜಿ ಶಾಸಕರಾದ ಕೆ.ಎಸ್.ಈಶ್ವರಪ್ಪ, ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ ಆರ್ ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾ.ಶಮಂತ್, ಡಿಎಸ್‍ಪಿ ಚಂದ್ರಶೇಖರ್ ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago