ಶಿವಮೊಗ್ಗ : ಚಲಿಸುತ್ತಿದ್ದ ರೈಲಿನ ಎಂಜಿನ್ ಕಳಚಿ ಕೆಲಕಾಲ ಭಯದ ವಾತಾವರಣ ಬಿದರೆ ಬಳಿ ನಡೆದಿದ್ದು ಭಾರಿ ಅನಾಹುತವೊಂದು ತಪ್ಪಿದೆ.
ತಾಳಗುಪ್ಪ – ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟ ರೈಲು
ಶಿವಮೊಗ್ಗ ಸಮೀಪದ ಬಿದರೆ ಬಳಿ ಬರುತ್ತಿದ್ದಂತೆ ಎಂಜಿನ್ ಬೇರ್ಪಟ್ಟಿದೆ.
ಬೆಳಗ್ಗೆ 7 ಗಂಟೆಗೆ ಬಿದರೆ ಹಳೆ ರೈಲು ನಿಲ್ದಾಣ ಸಮೀಪಿಸುತ್ತಿದಂತೆ ಈ ಘಟನೆ ನಡೆದಿದ್ದು ಕಪ್ಲಿಂಗ್ ಸಡಿಲಗೊಂಡ ಹಿನ್ನೆಲೆ ಬೋಗಿಗಳಿಂದ ಎಂಜಿನ್ ಬೇರ್ಪಟ್ಟಿದೆ ಎನ್ನಲಾಗಿದೆ.
ಬಿದರೆ ಪ್ರದೇಶ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳಾಗಿಲ್ಲ.
ಬೋಗಿಗಳನ್ನು ಬಿಟ್ಟು ಸ್ವಲ್ಪ ದೂರ ಎಂಜಿನ್ ಚಲಿಸಿದೆ. ತಕ್ಷಣವೇ ಸಿಬ್ಬಂದಿಗಳು ಎಚ್ಚೆತ್ತು ಸಮಸ್ಯೆ ಬಗೆಹರಿಸಿದ್ದಾರೆ ನಂತರ ಬೆಂಗಳೂರು ಕಡೆಗೆ ರೈಲು ಹೊರಟಿದೆ. ಇದರಿಂದ ಕೆಲಕಾಲ ಪ್ರಯಾಣಿಕರು ಪರದಾಡಿದರು.
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…