Categories: Shivamogga

ಭದ್ರಾವತಿ ಎಫ್‍ಎಂನಲ್ಲಿ ಹೊಸ ಕಾರ್ಯಕ್ರಮಗಳ ಪ್ರಸಾರ


ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ ಎಫ್.ಎಂ 103.5, MW 675 KHz ನಲ್ಲಿ ಜೂನ್ 01 ರಿಂದ ಹಲವಾರು ಹೊಸ ಕಾರ್ಯಕ್ರಮಗಳು ಪ್ರಸಾರವಾಗಲಿದೆ.


ಪ್ರತಿ ದಿನ ಬೆಳಿಗ್ಗೆ 6.15 ರಿಂದ 6.30 ರವರೆಗೆ ಭಕ್ತಿ ಸಂಗೀತ ಒಳಗೊಂಡ ಗೀರಾರಾಧನ, 6.35 ರಿಂದ 6.40 ರವರೆಗೆ ಡಾ.ಗುರುರಾಜ ಕರ್ಜಗಿ ಅವರ ‘ಕರುಣಾಳು ಬಾ ಬೆಳಕೆ’ ಸರಣಿಯಲ್ಲಿ ವಿವಿಧ ಕಥನಗಳು(ವಾರದ ಎಲ್ಲಾ ದಿನಗಳು), ಬೆಳಿಗ್ಗೆ 6.45 ಕ್ಕೆ ಆರೋಗ್ಯ ವೃದ್ದಿಗೆ ಹೆಲ್ತ್ ಟಿಪ್ಸ್ ಪ್ರಸಾರವಾಗಲಿದೆ.


ಬೆಳಿಗ್ಗೆ 9 ಗಂಟೆ 5 ನಿಮಿಷದಿಂದ 9.35 ರವರೆಗೆ ಕೇಳುಗರ ಆಯ್ಕೆಯ ಕನ್ನಡ ಚಿತ್ರಗೀತೆಗಳು ಪ್ರಸಾರವಾಗಲಿವೆ. ಬೆಳಿಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ಪದಬಂಧ, ಒಗಟು ಹಾಗೂ ನಮ್ಮ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳ ಪರಿಚಯ, ರಸಪ್ರಶ್ನೆ ಹಾಗೂ ಸಾಧಕರ ಪರಿಚಯಗಳನ್ನೊಳಗೊಂಡ ಕೇಳುಗರ ಭಾಗವಹಿಸುವಿಕೆಯ ವಿನೂತನ ಚಿತ್ರಗೀತೆಗಳ ಕಾರ್ಯಕ್ರಮ, ಇದರಲ್ಲಿ ಕೇಳುಗರು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಅವರ ಇಷ್ಟದ ಚಿತ್ರಗೀತೆಯೊಟ್ಟಿಗೆ ನೇರವಾಗಿ ಭಾಗವಹಿಸಲು ಅವಕಾಶವಿರುತ್ತದೆ.


ಹಿಂದಿ ಚಿತ್ರಗೀತೆ ಪ್ರಿಯರಿಗೆ ಸಂಜೆ 7.45 ರಿಂದ 8 ಗಂಟೆವರೆಗೆ ವಿಶೇಷ ಕಾರ್ಯಕ್ರಮ. ಪ್ರತಿ ಮಂಗಳವಾರ ರಾತ್ರಿ 9.30 ಕ್ಕೆ ಯಕ್ಷಗಾನ ಪ್ರಿಯರಿಗೆ ತಾಳಮದ್ದಲೆ, ನಾಟಕ ಪ್ರಿಯರಿಗೆ ಶುಕ್ರವಾರ ರಾತ್ರಿ 9.30 ಕ್ಕೆ ನಾಟಕಗಳ ಪ್ರಸಾರ ಆಗಲಿದೆ.
ಚಿಂತನ, ಆರೋಗ್ಯ, ಸಾಹಿತ್ಯ, ಯುವ ಪ್ರತಿಭೆಗಳಿಗೆ ಅವಕಾಶ, ಶಿಕ್ಷಣ, ಸಾಹಿತ್ಯ, ಕೃಷಿ ಕಾರ್ಯಕ್ರಮ, ಸಂಗೀತ, 4 ಭಾಷೆಯ ಸುದ್ದಿ ಸಮಾಚಾರದೊಂದಿಗೆ ಈ ಎಲ್ಲ ಹೊಸ ಕಾರ್ಯಕ್ರಮಗಳ ಪರಿಚಯ, ನಿಮ್ಮ ಮೆಚ್ಚಿನ ಆಕಾಶವಾಣಿ ಭದ್ರಾವತಿ ಎಫ್‍ಎಂ 103.5 ಹಾಗೂ ಮೀಡಿಯಂ ವೇವ್ಸ್ 675 ಕಿಲೋ ಹಟ್ರ್ಸ್ ತರಂಗಾಂತರದಲ್ಲಿ ಕೇಳಬಹುದು.


ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ : 9481572600 ಮುಖಾಂತರ ಹಂಚಿಕೊಳ್ಳಬಹುದೆಂದು ಭದ್ರಾವತಿ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ತಿಳಿಸಿದ್ದಾರೆ.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 hour ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

2 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

7 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

24 hours ago