Categories: Shivamogga

ಭಾರತ- ಪಾಕ್ ಯುದ್ಧದಲ್ಲಿ ಸೆಣೆಸಾಡಿದ್ದ ಟ್ಯಾಂಕರ್ ಮಲೆನಾಡಿಗೆ

ಶಿವಮೊಗ್ಗ : ನಗರಕ್ಕೆ ಇಂದು ಸಂತೋಷದದಿನವಾಗಿದೆ. ಸ್ವಾತಂತ್ರ್ಯದ 75 ರ ಸಂಭ್ರಮದಲ್ಲಿರುವ ನಾವು ಬಾಂಗ್ಲಾ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡ ಟಿ-55 ನಿಷ್ಕ್ರೀಯ ಯುದ್ಧ ಟ್ಯಾಂಕರ್ ಅನ್ನು ಇಂದು ನಗರಕ್ಕೆ ತರಲಾಗಿದೆ.


ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹಾನಗರ ಪಾಲಿಕೆ ಮತ್ತು ನಿವೃತ್ತ ಸೈನಿಕರ ಸಂಘದಿಂದ ಟ್ಯಾಂಕರ್ ಅನ್ನು ಅದ್ಧೂರಿ ಯಾಗಿ, ಸಂಭ್ರಮದಿಂದ ಬರಮಾಡಿ ಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ‌ ಎಸ್.ಎನ್. ಚನ್ನಬಸಪ್ಪ, 2020 ರಲ್ಲಿ ರಕ್ಷಣಾ‌ ಇಲಾಖೆಗೆ ನಿಷ್ಕಿçಯ ಯುದ್ಧ ಟ್ಯಾಂಕರ್ ಅಥವಾ ವಿಮಾನಗಳನ್ನು ನೀಡುವಂತೆ ಮನವಿ ಮಾಡಿದ್ದೆವು. ಈಗ ಅದಕ್ಕೆ ಫಲ ಸಿಕ್ಕಿದೆ. ಸೈನಿಕ ಇಲಾಖೆಯ ಉಪನಿರ್ದೇಶಕ ಹಿರೇಮಠ್ ಅವರು ವಿಶೇಷ ಆಸಕ್ತಿ ವಹಿಸಿದ್ದರು. ಪೂನಾದ ರಕ್ಷಣಾ‌ ಕಾರ್ಯಾಲಯದಿಂದ ಮೂರು ದಿನ ಪ್ರಯಾಣ ಮಾಡಿ ಯುದ್ಧ ಟ್ಯಾಂಕರ್ ನಗರಕ್ಕೆ ಆಗಮಿಸಿದೆ. ಇದು 1971 ರ ಬಾಂಗ್ಲಾ ಯುದ್ಧದ ಗೆಲುವಿಗೆ ಕಾರಣವಾಗಿತ್ತು. ಈಗ ಇಲ್ಲಿ
ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


ಇದನ್ನು ಎಲ್ಲಿ ಸ್ಥಾಪಿಸಬೇಕೆಂದು ಇನ್ನೂ ಅಂತಿಮ‌ ತೀರ್ಮಾನವಾಗಿಲ್ಲ. ಸದ್ಯದಲ್ಲೇ ಇನ್ನೊಂದು ನಿಷ್ಕ್ರೀಯ
ವಿಮಾನ ಕೂಡ ಬರಲಿದ್ದು, ಎಂ.ಆರ್.ಎಸ್. ವೃತ್ತ ಅಥವಾ ಫ್ರೀಡಂ ಪಾರ್ಕ್ ಅಥವಾ ಐಬಿ ಸರ್ಕಲ್ ನಲ್ಲಿ ಸ್ಥಾಪಿಸಲು ಯೋಚನೆ ಇದೆ ಎಂದರು.


ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ‌ ಉಮೇಶ್ ಬಾಪಟ್ ಮಾತನಾಡಿ, ನಮಗೆಲ್ಲರಿಗೂ ಇಂದು ಸಂಭ್ರಮದ ದಿನವಾಗಿದೆ. ಮಾಜಿ ಸೈನಿಕರ ಸಂಘ ಇದನ್ನು ತರಲು ತುಂಬಾ ಪ್ರಯತ್ನ ಮಾಡಿತ್ತು.‌ ಯುವಕ, ಯುವತಿಯರಿಗೆ ಇದೊಂದು ಆಕರ್ಷಣೆ ಮತ್ತು ಪ್ರೇರಣೆಯಾಗಿದೆ ಎಂದರು.


ಈ ಸಂದರ್ಭದಲ್ಲಿ ಶಾಸಕರಾದ ಎಸ್. ರುದ್ರೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ್ ನಾಯ್ಕ್, ಸರ್ಕಾರಿ‌ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪಾಲಿಕೆ ಸದಸ್ಯರಾದ ಸುವರ್ಣಾ ಶಂಕರ್, ಸುರೇಖಾ ಮುರಳೀಧರ್, ವಿಶ್ವನಾಥ್, ಪ್ರಭು, ಮಂಜುನಾಥ್, ಅನಿತಾ ರವಿಶಂಕರ್, ಇತರರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

9 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

11 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

12 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

17 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

18 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago