Categories: ShivamoggaSoraba

ಭಾಷಾ ಹಬ್ಬ ಮಕ್ಕಳಲ್ಲಿ ಭಾಷೆಯ ಪ್ರಭುತ್ವ ಹೆಚ್ಚಿಸುವುದಕ್ಕೆ ಸಹಕಾರಿ ; ರಾಘವೇಂದ್ರ

ಸೊರಬ : ಭಾಷಾ ಹಬ್ಬ ಕಾರ್ಯಕ್ರಮವು ಮಕ್ಕಳಲ್ಲಿ ಭಾಷೆಯ ಒಂದು ಪ್ರಭುತ್ವವನ್ನು ಹೆಚ್ಚಿಸುವುದಕ್ಕೆ ಸಹಕಾರಿಯಾಗಿದೆ ಎಂದು ಕ್ಲಸ್ಟರ್ನ ಸಿ.ಆರ್.ಪಿ. ಎಂ.ಎಲ್ ರಾಘವೇಂದ್ರ ಹೇಳಿದರು.

ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ಆದೇಶದಂತೆ ಹಮ್ಮಿಕೊಂಡಿದ್ದು ಭಾಷಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಭಾಷೆಗೆ ಸಂಬಂಧಪಟ್ಟಂತಹ ಕಥೆ, ಸಂಭಾಷಣೆ,ಕವನ, ನಾಟಕ ಅಂತಹ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಶಿಕ್ಷಕರು ಪರಿಚಯಿಸಿ ಮಕ್ಕಳಿಗೆ ಮಾರ್ಗದರ್ಶನ ಮಾಡಿಸಬೇಕು. ಇಂತಹ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ಭಾಷೆಯ ಬಗ್ಗೆ ಅಭಿಮಾನ ಮತ್ತು ಹಿಡಿತ ಬರುತ್ತದೆ‌. ಹಾಗಾಗಿ ಶಾಲಾ ಶಿಕ್ಷಣ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ಮುಂದಿನ ದಿನಗಳಲ್ಲಿ ಚಂದ್ರಗುತ್ತಿ ಕ್ಲಸ್ಟರ್ ಹಂತದಲ್ಲಿ ಬರುವ ಎಲ್ಲಾ ಶಾಲೆಗಳ ಮಕ್ಕಳಿಗೆ ಪೂರಕವಾಗುವಂತೆ ಭಾಷಾ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಭಟ್ ವಹಿಸಿದ್ದರು. ಭಾಷಾ ಹಬ್ಬದ ಪ್ರಯುಕ್ತವಾಗಿ ವಿದ್ಯಾರ್ಥಿಗಳು ವಿವಿಧ ರೀತಿಯ ಕಾರ್ಯಕ್ರಮಗಳು ಪ್ರದರ್ಶಿಸಿದರು.


ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮವಾದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವುದರ ಮೂಲಕ ಮಕ್ಕಳ ಭೌದ್ಧಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಯಶಸ್ವಿಯ ದಿಕ್ಸೂಚಿಯನ್ನು ತೋರಿಸಿದ್ದಾರೆ ಎಂದು ಶಾಲಾ ಅಭಿವೃದ್ಧಿ ಸಮಿತಿಯವರು ಪ್ರಶಂಸೆ ವ್ಯಕ್ತಪಡಿಸಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಶಾಂತಲಾ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಭವಾನಿ ಚಂದ್ರಕಾಂತ್, ಸದಸ್ಯರಾದ ಗಣೇಶ್ ಮರಡಿ, ಪ್ರಶಾಂತ್ ನಾಯ್ಕ್, ಪ್ರಕಾಶ್ ಭಟ್, ಗಣಪತಿ ಎಂ.ಜಿ, ಉಷಾ, ಯಾಸ್ಮಿನ್, ಸಲ್ಮಾ, ಶಿಕ್ಷಕರಾದ ಮಮತಾ, ನೂರ್ ಫಾತಿಮಾ, ಕಾವ್ಯ, ಭವ್ಯ, ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago