ಶಿವಮೊಗ್ಗ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಸೂಚನೆ ಮೇರೆಗೆ ಪಿಸಿ & ಪಿಎನ್ಡಿಟಿ ಕಾಯಿದೆಯ ಅನ್ವಯ ಡಿಐಎಂಸಿ ತಂಡವು ಸಾಗರದ ಚಾಮರಾಜಪೇಟೆಯ ಸಂಜೀವಿನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಸ್ಕ್ಯಾನಿಂಗ್ಗೆ ಸಂಬಂಧಿಸಿದ ದಾಖಲೆಗಳು ಮತ್ತು ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಸೀಲ್ ಮಾಡಲಾಗಿರುತ್ತದೆ.
ಮಾರ್ಚ್ 18 ರಂದು ಸಾಗರ ತಾಲ್ಲೂಕಿನ ಸೈದೂರು ಗ್ರಾಮ ಪಂಚಾಯಿತಿಯಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಗ್ರಾ.ಪಂ ವ್ಯಾಪ್ತಿಯ ತಡಗಳಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಗರ್ಭಿಣಿಯ ಆರೋಗ್ಯವನ್ನು ವಿಚಾರಿಸಿದಾಗ, ತಪಾಸಣೆಗೆಂದು ಇಲ್ಲಿಗೆ ಬಂದಿರುತ್ತೇನೆ, ಈ ಹಿಂದೆ ಸಂಜೀವಿನಿ ಆಸ್ಪತ್ರೆ, ಸಾಗರ ಇಲ್ಲಿ ತಪಾಸಣೆ ಮಾಡಿಸಿದ್ದು, ಆ ಸಂದರ್ಭದಲ್ಲಿ ತನಗೆ ಗಂಡು ಮಗು ಆಗುವುದಾಗಿ ತಿಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿರುತ್ತಾರೆ.
ಅದರನ್ವಯ ಜಿಲ್ಲಾಧಿಕಾರಿಗಳು ಪಿಸಿ & ಪಿಎನ್ಡಿಟಿ ಸಕ್ಷಮ ಪ್ರಾಧಿಕಾರದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಡಿಐಎಂಸಿ ತಂಡವು ಪಿಸಿ & ಪಿಎನ್ಡಿಟಿ ಕಾಯ್ದೆಯನ್ವಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದನ್ವಯ ಪರಿಶೀಲನೆ ನಡೆಸಿ ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಲಾಗಿರುತ್ತದೆ.
ಪಿಸಿ & ಪಿಎನ್ಡಿಟಿ ಸಲಹಾ ಸಮಿತಿಯಲ್ಲಿ ಈ ವಿಚಾರವನ್ನು ಮಂಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್ಓ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…