Categories: Shivamogga

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ ಹಾಗೂ ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಾಲಮೇಳ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳು ಅತ್ಯುತ್ತಮವಾದ ಪ್ರತಿಭೆಗಳನ್ನು ಹೊಂದಿದ್ದರು ಆದರೆ ಅವರುಗಳಿಗೆ ಅವಕಾಶಗಳು ಮತ್ತು ಪ್ರೋತ್ಸಾಹಗಳು ಸಿಗುತ್ತಿರಲಿಲ್ಲ. ಈಗ ಸರಕಾರ ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹವನ್ನು ಮತ್ತು ಪ್ರೇರಣೆಯನ್ನು ನೀಡಿ ಅವರುಗಳ ಪ್ರತಿಭೆಗಳನ್ನು ಸಮಾಜಕ್ಕೆ ಪರಿಚಯಿಸುವುದರ ಮೂಲಕ ಅವರುಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುತ್ತಿದ್ದಾರೆ. ಪ್ರತಿಯೊಂದು ಮಗು ತನ್ನದೇ ಆದ ಒಂದು ಪ್ರತಿಭೆಯನ್ನು ಹೊಂದಿರುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿರುವ ರಾಜ್ಯ ರ‍್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಹಾಗೂ ಚುನಾವಣಾ ಸಂರ‍್ಭದಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ. ಸರಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳ ಫಲಾನುಭವಿಗಳು ಅದರ ಪ್ರಯೋಜನವನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ತಿಳಿಸಿದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಸುಮಿತ್ರ ನಾಗರಾಜ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ, ಹೇಮಾವತಿ ಸತೀಶ್ ಗ್ರಾ.ಪಂ, ಅಧ್ಯಕ್ಷರು, ತಿಮ್ಮಪ್ಪ ಬೆಳ್ಳೂರು ಗ್ರಾಪಂ ಉಪಾಧ್ಯಕ್ಷರು, ಸದಸ್ಯರಾದ, ರಾಜೇಶ್, ರವೀಂದ್ರ, ಕವಿತಾ, ಅರುಣ್ ಕಟ್ಟೆ, ಷಣ್ಮುಖಪ್ಪ, ಪಲ್ಲವಿ ನಾಗರಾಜ್, ಶಾಲಾ ಅಭಿವೃದ್ಧಿ ಅಧ್ಯಕ್ಷ ಪುರುಷೋತ್ತಮ್, ಪಿಡಿಒ ಕುಶ, ಮೇಲ್ವಿಚಾರಕಿ ಚಂದ್ರಕಲಾ, ಅಂಗನವಾಡಿ ಕಾರ್ಯಕರ್ತೆ ವೀಣಾ, ಉಪಸ್ಥಿತರಿದ್ದರು,

ಶಿಕ್ಷಕ ಶಿವಮೂರ್ತಿ ಎಂ ಎಸ್ ಕಾರ‍್ಯಕ್ರಮ ನಿರೂಪಣೆ ಮಾಡಿದರು. ಕಿರಣ್ ಸ್ವಾಗತಿಸಿದರು. ಮೇದಿನಿ ವಂದಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago