Categories: Shivamogga

ಮತದಾನದ ಕುರಿತು ಅರಿವು ಮೂಡಿಸಲು ಡಿಸಿ ಸೂಚನೆ


ಶಿವಮೊಗ್ಗ : ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ ಮತದಾನ ಅರಿವು ಕಾರ್ಯಕ್ರಮ ಮಾಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.


ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.03 ರಂದು ಮತದಾನ ಜಾಗೃತಿ ಮತ್ತು ಚುನಾವಣಾ ತಯಾರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಳದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಶೇಷ ತರಬೇತಿ ನೀಡಿದ ಅವರು, ವಿಶೇಷವಾಗಿ ಮತಗಟ್ಟೆ ಮಟ್ಟದಲ್ಲಿ ಮತದಾನ ಅರಿವು ಮೂಡಿಸಲು ತಂಡಗಳನ್ನು ರಚಿಸಿ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಚುನಾವಣಾ ಜಾಗೃತಿ ಬಗ್ಗೆ ಶಾಲಾ, ಕಾಲೇಜು ಹಂತದಲ್ಲಿ ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು, ಶಾಲಾ ಹಾಗೂ ಕಾಲೇಜುಗಳಲ್ಲಿ ಸ್ಥಾಪಿಸಲಾಗಿರುವ ಎಲ್ಲ ಎಲೆಕ್ಟೊರಲ್ ಲಿಟರಸಿ ಕ್ಲಬ್(ಇಎಲ್‍ಸಿ) ಗಳಲ್ಲಿ ಮತದಾನ ಅರಿವು ಮೂಡಿಸುವ ಕಾರ್ಯವಾಗಬೇಕು. ಎಲ್ಲ ತಾಲ್ಲೂಕುಗಳ ಇಓ, ತಹಶೀಲ್ದಾರ್, ಬಿಇಓ ಗಳು ಸ್ವೀಪ್ ಸಮಿತಿ ಮೂಲಕ ಮತದಾನ ಜಾಗೃತಿ ವೇದಿಕೆಗಳನ್ನು ಸಕ್ರಿಯಗೊಳಿಸಿ, ಜನರಲ್ಲಿ ಮತದಾನದ ಅರಿವನ್ನು ಮೂಡಿಸಿ ಹೆಚ್ಚು ಮತದಾನವಾಗುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.


ಎಲ್ಲಾ ತಾಲ್ಲೂಕುಗಳಲ್ಲಿ ಇವಿಎಂ/ವಿವಿ ಪ್ಯಾಟ್ (EVM/VV PAT) ಮತದಾನ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯನ್ನು ಭಾಗವಹಿಸಿ ಮತದಾನ ಯಂತ್ರದ ಬಳಕೆ ಬಗ್ಗೆ ತಿಳಿದುಕೊಳ್ಳುವಂತೆ ಅವರು ಕೋರಿದರು.


ಇದೇ ವೇಳೆ ಭಾರತ ಚುನಾವಣಾ ಆಯೋಗ ಹೊರತಂದಿರುವ 2023 ರ ಚುನಾವಣೆ ಮತದಾನ ಜಾಗೃತಿ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಇಓ ಗಳು, ಡಿಡಿಪಿಐ, ಸ್ವೀಪ್ ನೋಡಲ್ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Malnad Times

Recent Posts

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

21 mins ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

50 mins ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

3 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

6 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

7 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

8 hours ago