Categories: Shivamogga

ಮತದಾನ ದಿನದ ಅಗತ್ಯ ಸಿದ್ದತೆಗಳ ಬಗ್ಗೆ ಡಿಸಿ-ಸಿಇಓ ಸೂಚನೆ


ಶಿವಮೊಗ್ಗ: ವಿಧಾನಸಭೆ ಚುನಾವಣಾ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ, ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಭೂತ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚನೆ ನೀಡಿದರು.


ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತು ಇಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಜೊತೆ ವಿಸಿ ಮೂಲಕ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.


ಜಿಲ್ಲಾಧಿಕಾರಿಗಳು ಮಾತನಾಡಿ, ಇಓ ಗಳು ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯ ಭರವಸೆಗಳಾದ(ಎಎಂಎಫ್) ಶಾಮಿಯಾನ, ಕುಡಿಯುವ ನೀರು, ಪೋಲಿಂಗ್ ಅಧಿಕಾರಿಗಳಿಗೆ ಊಟದ ವ್ಯವಸ್ಥೆಯನ್ನು ಅತ್ಯಂತ ಕಾಳಜಿ ವಹಿಸಿ ಮಾಡಬೇಕು. ಪ್ರತಿ ಬೂತ್‍ಗಳಿಗೆ ಒಬ್ಬ ಸಹಾಯಕರನ್ನು ಈಗಲೇ ನೇಮಿಸಬೇಕು. ಹಾಗೂ ಕ್ಲಸ್ಟರ್ ಬೂತ್ ಮತ್ತು ರಿಮೋಟ್ ಮತಗಟ್ಟಗಳಿಗೆ ಭೇಟಿ ನೀಡಿ ಎಲ್ಲ ರೀತಿಯ ಅಗತ್ಯ ವ್ಯವಸ್ಥೆ ಮಾಡಬೇಕು.
ಕನಿಷ್ಟ ಸೌಲಭ್ಯಗಳನ್ನು ಖಾತ್ರಿಪಡಿಸಲು ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಬೇಕು. ಮತದಾನ ದಿನದಂದು ತಮ್ಮ ತಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ ಅಗತ್ಯವಾದ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕೆಂದು ಸೂಚನೆ ನೀಡಿದ ಅವರು ಇಓಗಳು ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಮತದಾನ ದಿನದ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.


ಜಿಲ್ಲಾ ಪಂಚಾಯತ್ ಸಿಇಓ ಮಾತನಾಡಿ, ಇಓ ಗಳು ಪ್ರತಿ ಬೂತ್‍ಗಳಿಗೆ ಗ್ರಾ.ಪಂ ಯಿಂದ ಓರ್ವ ಸಿಬ್ಬಂದಿಯನ್ನು ಸಹಾಯಕರಾಗಿ ನೇಮಿಸಬೇಕು. ಮತದಾರರಿಗೆ ಅನುಕೂಲವಾಗುವಂತೆ ಶಾಮಿಯಾನ, ನೀರಿನ ವ್ಯವಸ್ಥೆ, ನಿರೀಕ್ಷಣಾ ಕೊಠಡಿ, ಫ್ಯಾನ್ ಮತ್ತು ಚೇರ್‍ಗಳ ವ್ಯವಸ್ಥೆ ಮಾಡಬೇಕು. ಹಾಗೂ ಮತದಾನ ದಿನದಂದು ಮತಗಟ್ಟೆಗಳ 500 ಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಚತೆ ಕಾಪಾಡಬೇಕು. ಪಿಡಿಓ ಗಳು ಹಿಂದಿನ ದಿನವೇ ಸ್ವಚ್ಚತೆ ಕ್ರಮ ಕೈಗೊಂಡು ಈ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.


ಮತದಾನ ಪ್ರಮಾಣ ಹೆಚ್ಚಿಸಲು ರಾಜ್ಯಾದ್ಯಂತ ಸ್ವೀಪ್ ಚಟುವಟಿಕೆಗಳು ನಡೆಯುತ್ತಿದ್ದು ಮೇ 7 ರಂದು ಎಲ್ಲ ತಾಲ್ಲೂಕುಗಳ ಮುಖ್ಯ ಸರ್ಕಲ್‍ಗಳಲ್ಲಿ ಮತದಾನ ಜಾಗೃತಿ ಕುರಿತು ಮಾನವ ಸರಪಳಿ ನಿರ್ಮಿಸಬೇಕು. ವಿಜಯ ಪ್ರಕಾಶ್ ಹಾಡಿರುವ ಹಾಗೂ ಡಾ.ಪುನೀತ್ ರಾಜ್ ಕುಮಾರ್‍ರವರ ಮತದಾನ ಕುರಿತಾದ ವಿಡಿಯೋ ಪ್ರದರ್ಶನ ಮಾಡಿ ತಮಗೆ ವರದಿ ಸಲ್ಲಿಸಬೇಕು. ಹಾಗೂ ಸಖಿ, ಯುವ, ಎತ್ನಿಕ್ ಸೇರಿದಂತೆ ಇತರೆ ಮಾದರಿ ಮತಗಟ್ಟೆಗಳ ಸ್ಥಾಪನೆ ಕುರಿತು ಜನರಿಗೆ ತಿಳಿಸಬೇಕು.


ಮತದಾನದ ಆಹ್ವಾನ ಪತ್ರಿಕೆಯನ್ನು ಪ್ರತಿ ತಾಲ್ಲೂಕಿಗೆ ನೀಡಲಾಗುವುದು. ವಿಶೇಷವಾಗಿ ಅಂಗವಿಕಲ, 80 ವರ್ಷ ಮೀರಿದ, ಮಹಿಳೆ ಮತದಾರರು ಮತ್ತು ಕಡಿಮೆ ಮತದಾನ ಆದ ಕಡೆ ಈ ಆಹ್ವಾನ ಪತ್ರಗಳನ್ನು ಹಂಚಿ ಮತದಾನಕ್ಕೆ ಆಹ್ವಾನ ನೀಡಬೇಕು. ಒಟ್ಟಾರೆ ಮತದಾರರ ಅನುಭವವನ್ನು ಉತ್ತಮಗೊಳಿಸಲು ಒತ್ತು ನೀಡಬೇಕು, ಜೊತೆಗೆ ಪೊಲೀಂಗ್ ಅಧಿಕಾರಿ, ಪೊಲೀಸ್ ಸಿಬ್ಬಂದಿಗಳನ್ನು ಅತಿಥಿಗಳ ರೀತಿ ನೋಡಿಕೊಳ್ಳಬೇಕು. ಹಾಗೂ ಮತದಾರರ ಬಗ್ಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು.


ಸಭೆಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್, ಸ್ವೀಪ್ ಜಿಲ್ಲಾ ನೋಡಲ್ ಅಧಿಕಾರಿ ಶ್ರೀಕಾಂತ್, ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು ಪಾಲ್ಗೊಂಡಿದ್ದರು.

Malnad Times

Recent Posts

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

43 mins ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

4 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

6 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

6 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

9 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

21 hours ago