Categories: Shivamogga

Karnataka Assembly Election | Shivamogga | ಮತದಾರರಿಗೆ ಆಮಿಷ ಒಡ್ಡುವುದು ಶಿಕ್ಷಾರ್ಹ ಅಪರಾಧ ; ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮತದಾರರಿಗೆ ಆಮಿಷ ಒಡ್ಡಲು ಯಾವುದೇ ರೀತಿಯಲ್ಲಿ ಹಣ ವರ್ಗಾಯಿಸುವುದು, ವಿವಿಧ ಸಾಧನ ಸಾಮಾಗ್ರಿಗಳ ವಿತರಣೆ, ಗಿಫ್ಟ್ ಓಚರ್‌ಗಳು, ಸಿಮ್ ಕಾರ್ಡ್ ಬ್ಯಾಲೆನ್ಸ್, ಪ್ರವಾಸಕ್ಕೆ ಏರ್ಪಾಡು ಮಾಡುವುದು, ಆಹಾರ ಪದಾರ್ಥಗಳ ವಿತರಣೆ, ಮದ್ಯ ಮತ್ತಿತರ ಪಾನೀಯಗಳ ವಿತರಣೆ, ವಾಹನಗಳಿಗೆ ಯಾವುದೇ ರೀತಿಯಲ್ಲಿ ಇಂಧನ ಭರಿಸುವುದು ಐಪಿಸಿ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1951 ಅಡಿ ಶಿಕ್ಷಾರ್ಹ ಅಪರಾಧವಾಗಿದೆ.

ಜನರು ಸೂಕ್ತ ದಾಖಲೆ ಅಥವಾ ಸಮಜಾಯಿಷಿಕೆ ಇಲ್ಲದೆ 50ಸಾವಿರ ರೂ. ಗಿಂತ ಅಧಿಕ ನಗದನ್ನು ಕೊಂಡೊಯ್ಯಬಾರದು. ಯಾವುದೇ ಸಾಧನ, ಸಾಮಾಗ್ರಿಗಳನ್ನು ಸೂಕ್ತ ದಾಖಲೆಗಳಿಲ್ಲದೆ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿಡುವುದು ಅಥವಾ ಸಾಗಾಟ ಮಾಡಬಾರದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜಾಹೀರಾತು ನಿರ್ಬಂಧ:

ಚುನಾವಣಾ ಸಂದರ್ಭದಲ್ಲಿ ಯಾವುದೇ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಥವಾ ಸಾರ್ವಜನಿಕರಿಗೆ ಕಾಣಿಸುವ ರೀತಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ಜಾಹೀರಾತುಗಳನ್ನು ಪ್ರಚುರಪಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಮುದ್ರಣ ನಿರ್ಬಂಧ:

ಚುನಾವಣಾ ಸಂದರ್ಭದಲ್ಲಿ ಯಾವುದೇ ಚುನಾವಣಾ ಕರಪತ್ರ, ಪ್ಲೆಕಾರ್ಡ್, ಬ್ಯಾನರ್, ಬಂಟಿಂಗ್ಸ್, ಫೆಕ್ಸ್, ಪೋಸ್ಟರ್ ಇತ್ಯಾದಿಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅದರಲ್ಲಿ ಮುದ್ರಕರ ಹೆಸರು, ವಿಳಾಸ, ಮುದ್ರಣ ಸಂಖ್ಯೆ ಇತ್ಯಾದಿ ವಿವರಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಮುದ್ರಣ ಕುರಿತಾಗಿ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ 3ದಿನಗಳ ಒಳಗಾಗಿ ಹಾಗೂ ಸಾಮಾಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆ ಪ್ರಜಾಪ್ರತಿನಿಧಿ ಕಾಯ್ದೆ 1951 ರ 127 (ಎ) ಉಲ್ಲಂಘನೆಯಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಪೂರ್ವಾನುಮತಿ ಕಡ್ಡಾಯ:

ಚುನಾವಣಾ ಜಾಹೀರಾತುಗಳನ್ನು ಕೇಬಲ್ ನೆಟ್‌ವರ್ಕ್ ಅಥವಾ ಟಿವಿ ಚಾನೆಲ್‌ಗಳಲ್ಲಿ ಪ್ರಸಾರ ಮಾಡುವ ಪೂರ್ವದಲ್ಲಿ ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆದಿರಬೇಕು ಎಂದು ಜಿಲ್ಲಾಧಿಕಾರಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಸುಗಮ ಮತ್ತು ನ್ಯಾಯಯುತ ಚುನಾವಣಾ ಪ್ರಕ್ರಿಯೆಗಾಗಿ ಈಗಾಗಲೇ ಸ್ಟಾಟಿಕ್ ಸರ್ವೆಯಲೆನ್ಸ್ ತಂಡಗಳು, ವಿಡಿಯೋ ವೀಕ್ಷಣಾ ತಂಡಗಳು ಹಾಗೂ ಫ್ಲಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ. ಮುಕ್ತ, ಪಾರದರ್ಶಕ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಕೋರಿದ್ದಾರೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

54 mins ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

2 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

15 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

18 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

18 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

19 hours ago