ಮದುವೆಗೆ 13 ದಿನ ಇರುವಾಗ ನೇಣಿಗೆ ಕೊರಳೊಡ್ಡಿದ ಯುವತಿ !
ತೀರ್ಥಹಳ್ಳಿ : ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಸ್ನಾನಗೃಹದ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.
ತಾಲೂಕಿನ ಕಟ್ಟೆಹಕ್ಲುವಿನ ಚೈತ್ರಾ (26) ಆತ್ಮಹತ್ಯೆಗೆ ಶರಣಾದ ಯುವತಿ. ಫೆಬ್ರವರಿ 4 ರಂದು ಚೈತ್ರಾ ಅವರಿಗೆ ಮದುವೆ ನಿಗದಿಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು, ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ನೇಣಿಗೆ ಕೊರಳೊಡ್ಡಿದ್ದಾರೆ.
ಎಂ.ಕಾಂ ಪದವೀಧರೆ ಆಗಿರುವ ಚೈತ್ರಾ ಕಟ್ಟೆಹಕ್ಲುವಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತದೇಹವನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.