ಶಿವಮೊಗ್ಗ : ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ.
ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಕೋಟೆ ಗ್ರಾಮದಲ್ಲಿ ಸ್ವಾಮಿನಾಥ (32) ಎಂಬ ಯುವಕ ಮೃತಪಟ್ಟಿದ್ದಾನೆ. ಸ್ವಾಮಿನಾಥ್ಗೆ ಎರಡು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹುಡುಗಿ ಈತನಿಗಿಂತ ಮೂರು ವರ್ಷ ದೊಡ್ಡವಳು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಬೇಸರಗೊಂಡಿದ್ದ ಈತ ಮದುವೆ ಬೇಡವೆಂದು ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ.
ಇದು ಹುಡುಗಿ ಮನೆಯವರಿಗೆ ತಿಳಿದು ಸ್ವಾಮಿನಾಥನ ಮನೆಗೆ ಬಂದು ಗಲಾಟೆ ಮಾಡಿ ಮದುವೆ ಆಗುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದೆ .ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇನ್ನು ಬಾಳಿ ಬದುಕಬೇಕಾಗಿದ್ದ ಯುವಕ ಕೇವಲ ಮದುವೆ ಕಾರಣಕ್ಕಾಗಿ ಆತ್ಮಹತ್ಯೆ ಯಂತಹ ನಿರ್ಧಾರ ತೆಗೆದುಕೊಂಡಿದ್ದು ಸ್ಥಳೀಯರಲ್ಲಿ ಬೇಸರವನ್ನುಂಟು ಮಾಡಿದೆ.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…