ರಿಪ್ಪನ್ಪೇಟೆ : ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.
ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ತರುವುದರೊಂದಿಗೆ ಸಾಕಷ್ಟು ಅಭಿವೃದ್ದಿಪಡಿಸಿದ್ದಾರೆ. ತಾಳುಗುಪ್ಪ – ಸಾಗರ – ಶಿವಮೊಗ್ಗ – ಬೆಂಗಳೂರು – ಮೈಸೂರು ಇಂಟರ್ ಸಿಟಿ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವುದರೊಂದಿಗೆ ಬಹುವರ್ಷದ ಬೇಡಿಕೆ ಸ್ಪಂದಿಸಿ ಈ ಮಲೆನಾಡಿನ ಭಾಗದ ರೈಲ್ವೆ ಪ್ರಯಣಿಕರಿಗೆ ಹೆಚ್ಚು ಅನುಕೂಲ ಕಲ್ಪಿಸಿರುವುದು. ಸಾಮಾನ್ಯ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮೂಲಕ ಜನಾನುರಾಗಿಯಾಗಿರುವ ರಾಘಣ್ಣ ಈ ಬಾರಿಯೂ ಹೆಚ್ಚಿನ ಮತಗಳ ಅಂತರದಿಂದ ಜಯಭೇರಿ ಬಾರಿಸಲು ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುತ್ತಿದ್ದು ಮತದಾರರಿಗೆ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಕೆರೆಹಳ್ಳಿ ಬೂತ ಅಧ್ಯಕ್ಷರಾದ ಈಶ್ವರರಾವ್, ಕೇತಾರ್ಜಿರಾವ್, ಮುರುಳಿ ಕೆರೆಹಳ್ಳಿ, ಕುಸುಮಾ, ರೇಣುಕಾಬಾಯಿ
ಲಕ್ಷ್ಮಿ, ಗೀತಾ, ಪುಪ್ಪಾವತಿ, ಅರ್ಜುನ, ಗಂಗಮ್ಮ, ಇನ್ನಿತರ ಕಾರ್ಯಕರ್ತರ ತಂಡ ಕೆರೆಹಳ್ಳಿಯ ವ್ಯಾಪ್ತಿಯ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…