ಶಿವಮೊಗ್ಗ : ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ ಬೆಳೆಯುವ ಪಾಟ್ಗಳಲ್ಲಿ ಗಾಂಜಾ ಬೆಳೆದು, ಅದನ್ನು ಟೇಬಲ್ಫ್ಯಾನ್ ಗಾಳಿಯಿಂದ ಒಣಗಿಸಿ, ಪ್ಯಾಕೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ಬಳಿ ಗಾಂಜಾ ಕೊಳ್ಳಲು ಪಾಂಡಿದೊರೈ ಹಾಗೂ ವಿನೋದ್ ಕುಮಾರ್ ಹೋಗಿದ್ದರು. ಈ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶಿವಗಂಗಾ ಲೇಔಟ್ ನಿವಾಸದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 6 ಸಾವಿರ ರೂ. ಮೌಲ್ಯದ ಹಸಿ ಗಾಂಜಾ, 20 ಸಾವಿರ ರೂ. ಮೌಲ್ಯದ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ ಚರಸ್, ಸೀರಿಂಜ್ಗಳು, ಹುಕ್ಕಾ ಕೊಳವೆ, 6 ಟೇಬಲ್ ಫ್ಯಾನ್ ಸೇರಿದಂತೆ ಇತರೆ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…