ಹೊಸನಗರ : ಪ್ರಸ್ತುತ ಬೆಳಗಿನಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಬುಧವಾರ ರಾತ್ರಿ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ (Shivamogga) ಜಿಲ್ಲೆಯ ಹಲವು ಭಾಗಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ (Heavy Rain) ಸುರಿಯುವ ಮೂಲಕ ಈ ವರ್ಷದ ಮೊದಲ ಮಳೆ ಹನಿ ಭೂಮಿಯನ್ನು ಸ್ಪರ್ಶಿಸಿ ಅಚ್ಚರಿ ಮೂಡಿಸಿದ್ದು, ಬೇಸಿಗೆಯ ಜಳಕ್ಕೆ ಬೇಸತ್ತಿದ್ದ ಜನರು ಮಳೆ ಸುರಿದು ವಾತಾವರಣ ತಂಪಾದ ಕಾರಣ ಖುಷಿಗೊಂಡಿದ್ದಾರೆ.
ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ತಡರಾತ್ರಿ 2:30ರ ಸುಮಾರಿಗೆ ಹೊಸನಗರ ತಾಲೂಕಿನ ಹಲವೆಡೆ ಆರಂಭವಾದ ಮಳೆ ಹೊಸನಗರ, ನಗರ, ನಿಟ್ಟೂರು, ರಿಪ್ಪನ್ಪೇಟೆ, ಹುಂಚ, ಕೋಡೂರು, ಗರ್ತಿಕೆರೆ ಭಾಗಗಳಲ್ಲಿ ಸುರಿದಿದೆ. ಇಂದು ಬೆಳಗ್ಗೆ ಸಹ ಮೋಡ ಕವಿದ ವಾತಾವರಣವಿದ್ದು ಜಿಟಿಜಿಟಿ ಮಳೆ ಬೀಳುತ್ತಿದೆ.
ಇನ್ನೂ ಕಾಫಿ, ಕಾಳುಮೆಣಸು, ಅಡಿಕೆ, ಭತ್ತದ ಫಸಲು ಕಟಾವು ಕಾರ್ಯ ನಡೆಯುತ್ತಿದ್ದು ಒಂದೆಡೆ ಮಳೆ ವರವಾದರೆ ಮತ್ತೊಂದೆಡೆ ಶಾಪವಾಗಿ ಪರಿಣಮಿಸಿದೆ.
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…