ಮಳೆ ತಂದ ಅವಾಂತರ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು !

0 828

ತೀರ್ಥಹಳ್ಳಿ : ಚಲಿಸುತಿದ್ದ ಬೈಕ್ ಮೇಲೆ ಮರವೊಂದು ಮುರಿದು ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಇಂದು ಸಂಜೆ 5:30ರ ಸುಮಾರಿಗೆ ನಡೆದಿದೆ.

ಸಂಪಗಾರಿನ ಜಯಂತ್ ಭಟ್ (64) ಮೃತ ದುರ್ಧೈವಿ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತ್ತಿದ್ದಾಗ ಇಂದು ಸಂಜೆ ಸುರಿದ ಭಾರಿ ಪ್ರಮಾಣದ ಗಾಳಿ, ಮಳೆಗೆ ಅಕೇಶಿಯಾ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಜಯಂತ್ ಭಟ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕೋಣಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕಿನ ಹಲವೆಡೆ ಇಂದು ಸಂಜೆ 5 ಗಂಟೆ ಸುಮಾರಿಗೆ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಗುಡುಗು ಸಿಡಿಲಬ್ಬರದಿಂದ ಕೂಡಿದ ಭಾರಿ ಪ್ರಮಾಣದ ಮಳೆ ಸುರಿದಿದ್ದು ಹಲವೆಡೆ ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದೆ.

Leave A Reply

Your email address will not be published.

error: Content is protected !!