ಶಿವಮೊಗ್ಗ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ದಿನಾಂಕ: 02.10.2023 ರಿಂದ ಒಂದು ತಿಂಗಳ ಅವಧಿಗೆ “ಮನೆ ಮನೆ ಜಾಥಾ” ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಮಾಹಿತಿಯನ್ನು ಜನರಿಗೆ ನೀಡಿ ಬೇಡಿಕೆಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದ್ದಾರೆ.
ಪ್ರತಿ ಮನೆಗೂ ಭೇಟಿ ನೀಡುವುದರ ಜೊತೆಗೆ ದಿನಾಂಕ : 02-10-2023 ರಿಂದ
ದಿನಾಂಕ: 31.10.2023ರವರೆಗೆ ನಿರಂತರವಾಗಿ ಜಾಗೃತಿ ವಾಹನದ ಧ್ವನಿ ವರ್ಧಕ) ಮೂಲಕ ಗ್ರಾಮಸ್ಥರು, ಹಿರಿಯ ನಾಗರಿಕರು, ಮಹಿಳೆಯರು, ದುರ್ಬಲ ವರ್ಗದವರು, ಲಿಂಗತ್ವ ಅಲ್ಪಸಂಖ್ಯಾತರು, ಸ್ವ-ಸಹಾಯ ಸಂಘಗಳು ಹಾಗೂ ರೈತರಿಗೆ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ “ಜಲ ಸಂಜೀವಿನಿ” ಕಾರ್ಯಕ್ರಮದ ಮಹತ್ವದ ಬಗ್ಗೆ ಪ್ರಚಾರ ಆಂದೋಲನ ಕೈಗೊಳ್ಳಲಾಗುತ್ತಿದೆ.
ಕಾಮಗಾರಿಗಳ ಬೇಡಿಕೆ ಅರ್ಜಿಗಳನ್ನು ಸ್ವೀಕರಿಸಲು ಜಾಗೃತಿ ವಾಹನದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮತ್ತು ಗ್ರಾಮ ಪಂಚಾಯತಿಯಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆಯನ್ನಿಟ್ಟು ದಿನಾಂಕ: 31.10.2023 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.
ರೈತರಿಂದ ರೈತರಿಗಾಗಿ ಅಭಿಯಾನ:
ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿಯಂತೆ ಒಟ್ಟು ವೆಚ್ಚದ ಶೇ.60 ರಷ್ಟನ್ನು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಖರ್ಚು ಮಾಡಬೇಕಾಗಿದ್ದು, ವೈಯಕ್ತಿಕ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಯನ್ನು ಸರಳಗೊಳಿಸುವ ಉದ್ದೇಶದಿಂದ “ಜಲ ಸಂಜೀವಿನಿ” ಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ, ಬಿ.ಪಿ.ಎಲ್ ಕುಟುಂಬಗಳು, ಸಣ್ಣ ಮತ್ತು ಅತಿ ಸಣ್ಣ ರೈತರು, ಅಂಗವಿಕಲರು ಸೇರಿದಂತೆ ಮಹಾತ್ಮಗಾಂಧಿ ನರೇಗಾ ಅಧಿನಿಯಮದ ಅನುಸೂಚಿ-1, ಪ್ಯಾರಾ 5 ರಲ್ಲಿ ವಿವರಿಸಿರುವ ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಗೆ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು.
ಜಲಾನಯನ ಮಾದರಿಯಲ್ಲಿ ಕಾಮಗಾರಿಗಳ ಅನುಷ್ಟಾನದ ಹಂತದಲ್ಲಿ, ಫಲಾನುಭವಿಯು/ಕುಟುಂಬವು ಜೀವಿತಾವಧಿಯಲ್ಲಿ ರೂ.2.50 ಲಕ್ಷಗಳ ಮಿತಿಯೊಳಗೆ ತನಗೆ ಬೇಕಾದ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
“ಮನೆ ಮನೆ ಜಾಥಾ” ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆಗೆ ಭೇಟಿ ನೀಡಿ ಕೂಲಿ ಮತ್ತು ಕಾಮಗಾರಿ ಬೇಡಿಕೆ ಪಡೆಯುವ ಮೂಲಕ ಎಸ್ಸಿ, ಎಸ್ಟಿ ಸೇರಿದಂತೆ ದುರ್ಬಲ ವರ್ಗದವರಿಗೆ, ರೈತರಿಗೆ, ಮಹಿಳೆ/ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…