Categories: Shivamogga

ಮಹಿಳೆಯರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೃಜನಶೀಲತೆ ಹೆಚ್ಚಿಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬಹುದು ; ಗೋಪಾಲ್ ಯಡಗೆರೆ

ಶಿವಮೊಗ್ಗ: ಮಹಿಳೆಯರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೃಜನಶೀಲತೆ ಹೆಚ್ಚಿಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು.


ಇಲ್ಲಿನ ಪತ್ರಿಕಾಭವನದಲ್ಲಿ ಶನಿವಾರ ಮನ್ವಂತರ ಮಹಿಳಾ ಮಂಡಳ, ಶಿವಮೊಗ್ಗ ಜಿ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಹಿಳೆಯರಿಗಾಗಿ ಮಹಿಳಾ ಕೇಂದ್ರಿತವಾದ ಮತ್ತೆ ಆಡೋಣ ಬನ್ನಿ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊರುವ ಮಹಿಳೆ ಸಾಕಷ್ಟು ಒತ್ತಡ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ. ಕುಟುಂಬ ವೃತ್ತಿ ನಿರ್ವಹಣೆ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ಮಹಿಳೆ ಹೆಚ್ಚು ತೊಡಗಿಕೊಳ್ಳಬೇಕು. ಎಂತಹ ಕಠಿಣ ಸಂದರ್ಭಗಳನ್ನು ನಿಭಾಯಿ ಸುವಂತ ಸೃಜನಶೀಲತೆ ಮಹಿಳೆ ಅಗತ್ಯವಾಗಿದ್ದು, ಸಾಮರ್ಥ್ಯಕ್ಕೆ ಇಂಬು ನೀಡುವಂತೆ ಸಾಮಾನ್ಯ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಓದಿನಲ್ಲಿ ಮಹಿಳೆಯರು ಯಾವಾಗಲು ಮುಂದೆ ಇರುತ್ತಾರೆ. ಓದಿನಾಚೆಗಿನ ಪ್ರಪಂಚದ ಬಗ್ಗೆಯೂ ಅವರು ಜ್ಞಾನ ಸಂಗ್ರಹಿಸಬೇಕು. ಮಹಿಳೆ ತನ್ನ ಚರ್ಚೆ, ಕಾರ್ಯಚಟುವಟಿಕೆಗಳನ್ನು ಸೀಮಿತಗೊಳಿಸಿಕೊಳ್ಳದೆ, ಸಮಗ್ರ ವಿಷಯಗಳತ್ತ ಆಳವಾದ ಜ್ಞಾನವನ್ನು ಪಡೆದುಕೊಳ್ಳಬೇಕು. ಆಗ ನಮ್ಮೊಳಗಿನ ಐಕ್ಯೂ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಗಮನ ಹರಿಸಬೇಕು ಎಂದು ಹೇಳಿದರು.


ಆಚಾರ್ ಗ್ರೋಪ್ ಆಫ್ ಕಂಪನಿಯ ಅಧ್ಯಕ್ಷ ಜೋಯ್ಸ್ ರಾಮಾಚಾರ್ ಮಾತನಾಡಿ, ಸಮಾಜ ತಿದ್ದುವಲ್ಲಿ ಮಹಿಳೆ ಪಾತ್ರ ಹಿರಿದಾಗಿದ್ದು, ಮಹಿಳೆ ಹಿಂಜರಿಕೆ ತೊರೆದು ಧೈರ್ಯದಿಂದ ಮುನ್ನಡೆಯಬೇಕು ಎಂದರು.


ಮಹಿಳೆ ಮನೆ ನಿರ್ವಹಣೆಗಷ್ಟೇ ಸೀಮಿತಗೊಳ್ಳದೇ ತಾವು ಪಡೆದುಕೊಂಡ ಶಿಕ್ಷಣವನ್ನು ಸದುಪಯೋಗ ಮಾಡಿಕೊಂಡು ಉದ್ಯೋಗ ಗಿಟ್ಟಿಸಿಕೊಳ್ಳಬೇಕು. ಆಗ ಮಾತ್ರ ಆಕೆ ಆರ್ಥಿಕ ಸಬಲತೆಯನ್ನು ಗಳಿಸಬಹುದು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮನ್ವಂತರ ಮಹಿಳಾ ಮಂಡಳ ಅಧ್ಯಕ್ಷೆ ಶ್ರೀರಂಜನಿ ದತ್ತಾತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಸುಗುಣ ವಾಲ್ಸ್ ಮತ್ತು ಪೈಪ್ಸ್ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿ ವಾರಿಜ ರಾಮಾಚಾರ್, ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ರಂಗಭೂಮಿ ಕಲಾವಿದ ಕಾಂತೇಶ್ ಕದರಮಂಡಲಗಿ, ರಂಗ ನಿರ್ದೇಶಕ ಹೊನ್ನಾಳಿ ಚಂದ್ರಶೇಖರ್, ಕಮಲ ನೆಹರು ಮಹಿಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಕಿರಣ್ ದೇಸಾಯಿ ಉಪಸ್ಥಿತರಿದ್ದರು.


ಲತಾ ಸೋಮಶೇಖರ್ ಸ್ವಾಗತಿಸಿದರು. ಜೋಯ್ಸ್ ರಾಮಾಚಾರ್ ದಂಪತಿಗಳನ್ನು ಸನ್ಮಾನಿಸಲಾಯಿತು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

1 hour ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

7 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

15 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago