Categories: Shivamogga

ಮಹಿಳೆಯರ ಋತುಬಂಧದ ಕುರಿತು ಜಾಗೃತಿ ಹೆಚ್ಚಬೇಕು ; ಡಿಹೆಚ್‍ಓ


ಶಿವಮೊಗ್ಗ : ಋತುಬಂಧದ ವೇಳೆ ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹೇಳಿದರು.


ಅವರು ಸೆ. 30 ರಂದು ಸೋಹಂ ಫೌಂಡೇಷನ್ ಹಾಗೂ ಮಿರರ್ ಥೆರಪ್ಯುಟಿಕ್ಸ್ ಸಂಸ್ಥೆ ಬೆಂಗಳೂರು ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಶಿವಮೊಗ್ಗ ಇವರ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ‘ಮಿರರ್-ಋತುಬಂಧ ಜಾಗೃತಿ ಎಲ್ಲರಿಗೂ’ ಎಂಬ ವಿಷಯ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಭಾಗದ ಹೆಣ್ಣುಮಕ್ಕಳಲ್ಲಿ ಋತುಬಂಧ ವಿಷಯದ ಕುರಿತು ಸಂಕೋಚ ಹೆಚ್ಚಿರುತ್ತದೆ. ಇಲ್ಲಿ ತರಬೇತಿ ಹೊಂದಿದ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು, ವ್ಯಾಯಾಮದ ಕುರಿತು ತಿಳಿಸಬೇಕು ಜೊತೆಗೆ ಆರೋಗ್ಯ ವೃದ್ದಿಗೆ ಅಗತ್ಯ ಸೇವೆಗಳನ್ನು ನೀಡುವ ಮೂಲಕ ನೆರವಾಗಬೇಕು.
ನಿಗದಿತ ಮನೆಕೆಲಸ, ತೋಟದ ಕೆಲಸದೊಂದಿಗೆ ಪೌಷ್ಟಿಕ ಆಹಾರ, ಸಿರಿಧಾನ್ಯ, ರಾಗಿ, ಬೀನ್ಸ್, ಮಾಂಸ, ಮೀನು, ಹಾಲು, ಮೊಟ್ಟೆ ಹಾಗೂ ವಿವಿಧ ರೀತಿಯ ಹಣ್ಣು, ಸೊಪ್ಪು, ತರಕಾರಿಗಳನ್ನು ಸೇವಿಸಬೇಕು. ಉಪ್ಪು ಮತ್ತು ಸಕ್ಕರೆಯನ್ನು ಕಡಿಮೆ ಬಳಸಬೇಕೆಂದರು.


ಯೂನಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಪ್ರಿಯಂವದ ಮಾತನಾಡಿ, ಋತುಬಂಧದ ಸಮಸ್ಯೆ ಕುರಿತು ಮಹಿಳೆಯರು ನಿರ್ಲಕ್ಷ್ಯ ಮಾಡಬಾರದು. ಗ್ರಾಮೀಣ ಭಾಗದಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.


ಸೋಹಂ ಫೌಂಡೇಷನ್ ಮತ್ತು ಮಿರರ್ ಥೆರಪ್ಯುಟಿಕ್ಸ್‍ನ ಗ್ರೇಸ್ ಮಿಶ್ರಾ ಮತ್ತು ಅನಿಲ್ ಕುಮಾರ್ ತರಬೇತಿ ನೀಡಿದರು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಶಮಾ, ಹಾಗೂ ಇತರರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago