ಶಿವಮೊಗ್ಗ : ಮಾಜಿ ಶಾಸಕ ವೈದ್ಯರತ್ನ ಡಾ. ಜಿ.ಡಿ. ನಾರಾಯಣಪ್ಪ ಅವರು ಸಕ್ರಿಯ ರಾಜಕೀಯದಿಂದ ದೂರ ಇರುವುದಾಗಿ ಪ್ರಕಟಿಸಿದ್ದಾರೆ.
ಹೊಸನಗರ ಕ್ಷೇತ್ರದಿಂದ 1999 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ತಮ್ಮ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವದಿಂದ ಜನ ಮನ್ನಣೆಗಳಿಸಿದವರು. 85 ರ ಹರೆಯದ ಅವರು ಈಗಲೂ ವೈದ್ಯಕೀಯ ವೃತ್ತಿ ಮಾಡುತ್ತಿದ್ದು, ವಯಸ್ಸು ಮತ್ತು ಇತರೆ ಸಾಮಾಜಿಕ ಜವಾಬ್ದಾರಿಗಳ ಕಾರಣದಿಂದ ರಾಜಕೀಯ ಕ್ಷೇತ್ರದಿಂದ ನಿವೃತ್ತಿಯಾಗುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸಂಬಂಧಿಕರೂ ಆಗಿದ್ದ ನಾರಾಯಣಪ್ಪ ಅವರು, ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸಿದ್ದು, ಸ್ವಯಂ ನಿವೃತ್ತಿ ಪಡೆದು ಬಂಗಾರಪ್ಪ ಅವರ ಅನುಯಾಯಿಯಾಗಿ ರಾಜಕೀಯ ಪ್ರವೇಶ ಮಾಡಿದ್ದರು. ಮಲೆನಾಡಿನ ಉತ್ತಮ ಶಸ್ತ್ರಚಿಕಿತ್ಸಕರೆಂದೇ ಖ್ಯಾತಿವೆತ್ತಿದ್ದಾರೆ. ತಮ್ಮ ರಾಜಕೀಯ ಬೆಳವಣಿಗೆಗೆ ಕಾರಣೀಭೂತರಾಗಿದ್ದ ದಿ.ಎಸ್.ಬಂಗಾರಪ್ಪ ಅವರನ್ನು ಸ್ಮರಿಸಿರುವ ನಾರಾಯಣಪ್ಪ ಅವರು, ತಮ್ಮ ರಾಜಕೀಯ ಪಯಣದಲ್ಲಿ ಜತೆಯಾಗಿದ್ದ ರಾಜಕಾರಣಿಗಳು, ಗೆಳೆಯರು ಹಾಗೂ ಅಭಿಮಾನಿಗಳು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…