Categories: Shivamogga

ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ದ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಮಾಜಿ ಸೈನಿಕ ಪಿ.ವೈ. ರವಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಒತ್ತಾಯಿಸಿದರು.


ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರವಿ ಅವರು ಮಾಜಿ ಸೈನಿಕರಾಗಿದ್ದು, ಸುಮಾರು 18 ವರ್ಷಗಳ ಕಾಲ ದೇಶ ಸೇವೆ ಮಾಡಿ ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ಕೃಷಿ ಕಾಯಕ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸಾಮಾಜಿಕ ಹೋರಾಟಗಾರರಾಗಿರುವ ಇವರ ಮೇಲೆ ಸ್ಥಳೀಯ ಕೆಲವರು ವಿನಾಕಾರಣ ನಿಂದಿಸಿ ಜಗಳ ಮಾಡುತ್ತಾ ಇರುತ್ತಾರೆ. ಆ.11ರಂದು ಇದೇ ಕಾರಣಕ್ಕಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರವಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು.
ರವಿ ಅವರು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ದುಶ್ಕರ್ಮಿಗಳು ಅವರನ್ನು ಕತ್ತಿ ಸಲಾಕೆಗಳಿಂದ ಹಲ್ಲೆ ಮಾಡಿದ ಪರಿಣಾಮವಾಗಿ ತಲೆ ಪೂರ್ತಿ ಒಡೆದುಹೋಗಿದ್ದು, ದೇಶ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದ ಮಾಜಿ ಸೈನಿಕನಿಗೆ ತನ್ನ ಪ್ರಾಣ ರಕ್ಷಿಸಿಕೊಳ್ಳಲಾಗದ ಸ್ಥಿತಿ ಬಂದಿರುವುದು ದುರ್ದೈವವಾಗಿದೆ ಎಂದರು.


ತಮ್ಮ ಮೇಲೆ ನಡೆದ ಹಲ್ಲೆಯ ವಿಚಾರವಾಗಿ ರಕ್ಷಣೆ ಕೋರಿ ರವಿ ಅವರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಕೂಡ ಪೊಲೀಸರು ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಿಕೊಳ್ಳದೆ ಹಲ್ಲೆಗೊಳಗಾದ ಮಾಜಿ ಸೈನಿಕನ ವಿರುದ್ಧವೇ ಮೊಕದ್ದಮೆ ದಾಖಲಿಸಿರುವುದು ಅತ್ಯಂತ ವಿಷಾದವಾಗಿದೆ. ಇದನ್ನು ನಮ್ಮ ಸಂಘ ಖಂಡಿಸುತ್ತದೆ. ಕ್ರಮ ತೆಗೆದುಕೊಳ್ಳದ ಶಿಕಾರಿಪುರ ಡಿವೈಎಸ್ಪಿಯವರ ವಿರುದ್ಧ ಮಾಜಿ ಸೈನಿಕರ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ. ಮತ್ತು ಜಿಲ್ಲಾಧಿಕಾರಿಗಳಿಗೆ , ಜಿಲ್ಲಾ ರಕ್ಷಣಾಧಿಕಾರಿಗಳಿಗೆ, ಸಂಸದರಿಗೆ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು ಎಂದರು.


ಹಲ್ಲೆಗೊಳಗಾದ ಮಾಜಿ ಸೈನಿಕನ ಪತ್ನಿ ಸಿ. ಶ್ರುತಿ ಮಾತನಾಡಿ, ರವಿ ಅವರು ಸಾಮಾಜಿಕ ಹೋರಾಟಗಾರರಾಗಿದ್ದರು. ಭ್ರಷ್ಟಾಚಾರ ಸಹಿಸುತ್ತಿರಲಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ನಡೆದ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಅವರು ಪ್ರಶ್ನೆ ಮಾಡಿದ್ದೇ ತಪ್ಪಾಗಿದೆ. ಗ್ರಾಪಂ. ಅಧ್ಯಕ್ಷರು ಮತ್ತು ಸದಸ್ಯರು ಇವರ ಹೋರಾಟವನ್ನು ಸಹಿಸದೆ ಈ ರೀತಿ ಹಲ್ಲೆ ನಡೆಸಿದ್ದಾರೆ. ನೆಮ್ಮದಿಯಾಗಿ ನಮ್ಮನ್ನು ಬದುಕಲು ಬಿಡುತ್ತಿಲ್ಲ. ಜಾತಿ ನಿಂದನೆ ಕೇಸು ಹಾಕುವ ಬೆದರಿಕೆ ಹಾಕುತ್ತಿದ್ದಾರೆ. ನಮಗೆ ರಕ್ಷಣೆಯೇ ಇಲ್ಲವಾಗಿದೆ. ನನಗೂ ಕೂಡ ಕಿರುಕುಳ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಮ್ಮ ಅಳಲನ್ನು ವ್ಯಕ್ತಪಡಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್. ದಿನೇಶ್, ರಾಜ್ಯ ಸಂಚಾಲಕ ವಾಸಪ್ಪ, ಉಪಾಧ್ಯಕ್ಷ ಮಾಲತೇಶ್, ಸದಸ್ಯರಾದ ಪುಟ್ಟರಾಜು, ಶಂಕ್ರಾನಾಯ್ಕ, ಸತೀಶ್ ಹೆಚ್.ಬಿ., ಜ್ಞಾನೇಶ್ವರ್ ಸೇರಿದಂತೆ ಹಲವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago