ಮಾದಕ ವಸ್ತುಗಳ ಸೇವನೆ, ಸಾಗಾಟ, ಸಂಗ್ರಹ ಶಿಕ್ಷಾರ್ಹ ಅಪರಾಧ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ; ಗಾಂಜಾ, ಚರಸ್, ಅಫೀಮು ಸೇರಿದಂತೆ ವಿವಿಧ ಬಗೆಯ ಮಾದಕ ದ್ರವ್ಯಗಳ ಸೇವನೆ, ಸಂಗ್ರಹ, ಸಾಗಣೆ ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸಿಪಿಐ ಗುರಣ್ಣ ಎಸ್ ಹೆಬ್ಬಾಳ್ ತಿಳಿಸಿದರು.

ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಮಾದಕ ದ್ರವ್ಯಗಳ ನಿರಂತರ ಸೇವನೆಯಿಂದ ವ್ಯಕ್ತಿಯಲ್ಲಿ ಆತಂಕ ಸೃಷ್ಟಿಸುತ್ತದೆ. ಇಡೀ ದೇಹ ಬೆವರುವುದು, ಮಾಂಸಖಂಡಗಳು ಸಡಿಲಗೊಳ್ಳುವುದು, ನಿದ್ರಾಹೀನ ಸ್ಥಿತಿ ತಲುಪಿ, ಏಕಾಂಗಿ ಓಡಾಟ ಮೊದಲಾದವು ಮಾದಕ ದ್ರವ್ಯಗಳ ಸೇವನೆಯ ಪರಿಣಾಮಗಳಾಗಿವೆ.


ಮಾದಕ ದ್ರವ್ಯ ಸೇವನೆ ದೃಡಪಟ್ಟಲ್ಲಿ ವ್ಯಕ್ತಿಗೆ ನ್ಯಾಯಾಲಯವು ಕನಿಷ್ಟ ಆರು ತಿಂಗಳಿನಿಂದ ಇಪ್ಪತ್ತು ವರ್ಷಗಳವರಗೂ ಜೈಲು ಶಿಕ್ಷೆ, ಸೂಕ್ತ ದಂಡ ವಿಧಿಸುತ್ತದೆ. ಮಾತ್ರೆ, ಚುಚ್ಚುಮದ್ದು, ವಾಸನೆ ಹಾಗೂ ದ್ರವರೂಪದಲ್ಲಿ ದೊರೆಯುವ ಹಲವು ಬಗೆಯ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿ ಸಮಾಜ ಕಂಟಕನಾಗಿ ಗೌರವ ರಹಿತ ಬದುಕು ಸಾಗಿಸಬೇಕಾಗುತ್ತದೆ. ಕುಟುಂಬದ ಸ್ವಾಸ್ಥ್ಯ ಹಾಳುಗೆಡಗುವ ಇಂತಹ ಅನಿಷ್ಟಗಳಿಂದ ಯುವ ಪೀಳಿಗೆ ದೂರವೇ ಉಳಿದು ಸಮಾಜಮುಖಿ ಚಿಂತನೆಯಲ್ಲಿ ಪಾಲ್ಗೊಳ್ಳುವ ಮೂಲಕ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಕಾಲೇಜಿನ ಪ್ರಭಾರಿ ಪ್ರಾಚಾರ್ಯೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಐಕ್ಯೂಎಸಿ ಸಂಚಾಲಕ ಸಿ.ಹೆಚ್.ರವಿ, ಎನ್‌ಎಸ್‌ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಎನ್. ಪ್ರದೀಪ್ ಕುಮಾರ್, ಘಟಕ-2ರ ಅಧಿಕಾರಿ ಡಾ. ಎಂ.ಟಿ. ಬಸವರಾಜಪ್ಪ, ಪ್ರೊ. ಪ್ರಭಾಕರ್ ಉಪಸ್ಥಿತರಿದ್ದರು.

ಕು. ನಿಖಿತಾ ಹಾಗೂ ದೀಪಿಕಾ ಪ್ರಾರ್ಥಿಸಿ, ಅನ್ನಪೂರ್ಣ ನಿರೂಪಿಸಿ, ರಾಜೇಶ್ವರಿ ವಂದಿಸಿದರು.

ವಿವಿಧ ರೀತಿಯ ಡ್ರಗ್ಸ್ ಸೇವನೆಯಿಂದಾಗಿ ವಿಶ್ವಾದ್ಯಂತ ಇಂದು 20 ಮಿಲಿಯನ್ ಜನರು ಮಾದಕ ದ್ರವ್ಯ ವ್ಯಸನಿಗಳಾಗಿದ್ದು, ಪ್ರತಿವರ್ಷ 5.70 ಲಕ್ಷ ಜನ ಇದರ ಸೇವನೆಯಿಂದ ಅಪಮೃತ್ಯುಗೆ ಒಳಗಾಗುತ್ತಿದ್ದಾರೆ. ಪ್ರತಿದಿನ ಅಂದಾಜು ಕನಿಷ್ಟ ಹತ್ತು ಮಂದಿ ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಶರಣಾಗುವ ಆತಂಕದ ಸ್ಥಿತಿ ದೇಶದಲ್ಲಿಂದು ನಿರ್ಮಾಣವಾಗಿದೆ.
ಗುರಣ್ಣ ಎಸ್ ಹೆಬ್ಬಾಳ್, ಸಿಪಿಐ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago