ತೀರ್ಥಹಳ್ಳಿ : ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ (Deer) ಬೇಟೆಗಾರನನ್ನು (Hunter) ಅರಣ್ಯಾಧಿಕಾರಿಗಳು (Forest Department) ಬಂಧಿಸಿದ ಘಟನೆ ನಡೆದಿದೆ.
ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ.
ಇನ್ನೂ 03 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು ಈ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರಡಿ ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಡಿಎಫ್ಒ ಶಿವಶಂಕರ ಇ., ಎಸಿಎಫ್ ಪ್ರಕಾಶ್ ಹೆಚ್.ಎಸ್. ಇವರುಗಳ ಮಾರ್ಗದರ್ಶನದಲ್ಲಿ ಮಂಡಗದ್ದೆ ಆರ್.ಎಫ್.ಓ ಆದರ್ಶ ಎಂ.ಪಿ. ರವರ ನೇತೃತ್ವದಲ್ಲಿ ನಡೆದಿದ್ದು, ಉಪ ವಲಯ ಅರಣ್ಯಾಧಿಕಾರಿ ಸುಹಾಸ ಬಿ.ಆರ್, ಗಸ್ತು ಅರಣ್ಯ ಪಾಲಕರಾದ ದುರುಗಪ್ಪ, ಮಹಾದೇವ ಕಣ್ಣೂರ ಹಾಗೂ ವಾಹನ ಚಾಲಕ ನವೀನ್. ಎಸ್. ಇವರುಗಳು ಪಾಲ್ಗೊಂಡಿದ್ದರು.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಕೃತ್ಯಕ್ಕೆ 03 ವರ್ಷಗಳ ಸೆರೆವಾಸ ಮತ್ತು 01 ಲಕ್ಷ ರೂ.ವರೆಗೆ ದಂಡದ ಶಿಕ್ಷೆ ಇರುತ್ತದೆ.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…