ಮಾ. 03 ರಂದು ಹೊಸನಗರ ತಾಲೂಕಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಹೊಸನಗರ : ಮಾ. 03ರ ಭಾನುವಾರದಂದು ಹುಟ್ಟಿದ ದಿನದಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಹೊಸನಗರ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು.

ಹೊಸನಗರ ತಾಲೂಕಿನಲ್ಲಿ ಒಟ್ಟು 7310 (ವಲಸೆ ಮಕ್ಕಳು ಸೇರಿ) ಮಕ್ಕಳಿದ್ದು, 205 ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಪೋಲಿಯೋ ಲಸಿಕೆ ನೀಡುವವರು ಎಲ್ಲಾ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಯವರು ಸೇರಿ 541 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ.

ತಾಲೂಕಿನಲ್ಲಿ 30 ಗ್ರಾಮ ಪಂಚಾಯಿತಿ ಮತ್ತು 1 ಪಟ್ಟಣ ಪಂಚಾಯಿತಿ ಇದ್ದು ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ಮಾಡಿಸಿ ಅಗತ್ಯ ಸಹಕಾರ ನೀಡಲು ಕೋರಲಾಗಿದೆ.

ಈ ಬಗ್ಗೆ ದಿನಾಂಕ ಫೆ. 23 ರಂದು ಹೊಸನಗರ ತಹಶೀಲ್ದಾರ್ ರಶ್ಮಿ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸುರೇಶ್, ಹುಟ್ಟಿದ ದಿನದಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಲು ಕೋರಿದರು.

ತಾಲೂಕಿನ ಮೆಸ್ಕಾಂ, ಐಸಿಡಿಎಸ್, ಪಂಚಾಯತ್ ರಾಜ್, ಶಿಕ್ಷಣ ಇಲಾಖೆ ಮತ್ತು ರೋಟರಿ, ಲಯನ್ಸ್ ಸಂಸ್ಥೆಯವರು ಸಹಕಾರ ನೀಡುವಂತೆ ಕೋರಲಾಯಿತು.

ಜಂತುಹುಳು ನಿವಾರಣಾ ದಿನ
ಫೆ.27 ರಂದು 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುವುದು.

ಹೊಸನಗರ ತಾಲೂಕಿನಲ್ಲಿ ಒಟ್ಟು 24740 ಮಕ್ಕಳ ಗುರಿಯಿದ್ದು, ಫೆ.29ರಿಂದ ಮಾ. 08ರ ವರೆಗೆ ಬಿಟ್ಟುಹೋದ ಮಕ್ಕಳಿಗೆ ಮಾಪ್ ಅಪ್ ರೌಂಡ್ ನಲ್ಲಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುವುದು.

ಈ ಬಗ್ಗೆ ಫೆ.23 ರಂದು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಎಲ್ಲಾ ಅಂಗನವಾಡಿ ಮತ್ತು ಶಾಲಾ ಮಕ್ಕಳು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ತಪ್ಪದೆ ಜಂತುಹುಳು ನಿವಾರಣಾ ಮಾತ್ರೆ ನೀಡುವಲ್ಲಿ ಎಲ್ಲಾ ಇಲಾಖೆಯವರು ಸಹಕಾರ ನೀಡಬೇಕಾಗಿ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಕೋರಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago