ಶಿವಮೊಗ್ಗ : ಮಾ.20 ರಂದು ಗೀತಾ ಶಿವರಾಜ್
ಕುಮಾರ್ ಮತ್ತು ಶಿವರಾಜ್ ಕುಮಾರ್ ಶಿವಮೊಗ್ಗಕ್ಕೆ ಬರಲಿದ್ದು, ಚುನಾವಣಾ ಪ್ರಚಾರ
ಆರಂಭಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.20ರಂದು ವಮೊಗ್ಗದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಗೀತಾ ಶಿವರಾಜ್ಕುಮಾರ್ರವರ ಜೊತೆಗೆ ಶಿವರಾಜ್ಕುಮಾರ್ ಕೂಡ ಬರುತ್ತಾರೆ. ನಂತರ ತಾಲ್ಲೂಕು ಮಟ್ಟದಲ್ಲಿ ಪ್ರಚಾರ ಆರಂಭವಾಗುತ್ತದೆ. ಶಿವರಾಜ್ಕುಮಾರ್ ತಮ್ಮ ಪತ್ನಿಗಾಗಿ ಪ್ರಚಾರ ಮಾಡುತ್ತಾರೆ. ಅದು ಅವರ ಜವಬ್ದಾರಿ ಕೂಡ ಆಗಿದೆ. ಹಲವು ಸಭೆಗಳು ಶಿವಮೊಗ್ಗದಲ್ಲಿ ನಡೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಬರಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದೆ. ಜನರಿಗೆ ಈಗಾಗಲೇ ನಮ್ಮ ಸರ್ಕಾರದ ಮೇಲೆ ವಿಶ್ವಾಸ, ನಂಬಿಕೆ, ಪ್ರೀತಿ ಬಂದಿದೆ. ಈ ಬಾರಿ ನಾವು ಗೆದ್ದೆ ಗೆಲ್ಲುತ್ತೇವೆ. ಬಿಜೆಪಿಯವರು ಪ್ರಚಾರ ತೆಗೆದುಕೊಳ್ಳುತ್ತಾರೆ. ಆದರೆ ನಾವು ತೆಗೆದುಕೊಳ್ಳುತ್ತಿಲ್ಲ ಅಷ್ಟೇ. ಈ ರಾಜ್ಯಕ್ಕೆ ನಿರ್ಮಲ ಸೀತಾರಾಮ್ರವರ ಸಾಧನೆ ಏನು ? ಎಂದು ನಾವು ಪ್ರಶ್ನೆ ಮಾಡಬೇಕಾಗುತ್ತದೆ ಎಂದರು.
ಬೋರ್ಡ್ ಪರೀಕ್ಷೆ ಮಾಡಬೇಕೆಂಬ ಹಠ ಇಲ್ಲ.
10ನೇ ತರಗತಿಗೆ ಹೆಚ್ಚು ಭಯವಿತ್ತು. ಅದನ್ನು ಹೋಗಲಾಡಿಸಲು ಪಬ್ಲಿಕ್ ಪರೀಕ್ಷೆ ಬೇಕು ಅಷ್ಟೇ. ಸಂಘ ಸಂಸ್ಥೆಗಳಿಗೆ ಕೋರ್ಟ್ಗೆ ಹೋಗಬೇಡಿ ಎಂದು ಹೇಳಲು ಆಗುವುದಿಲ್ಲ. ಅದೆಲ್ಲವು ಮುಂದೆ ತೀರ್ಮಾನವಾಗುತ್ತದೆ. ವಿದ್ಯಾರ್ಥಿಗಳ, ಪೋಷಕರ ಹಿತದೃಷ್ಟಿಯನ್ನು ಇಟ್ಟುಕೊಂಡು ಶಿಕ್ಷಣ ಸಚಿವನ್ನಾಗಿ ನಾನು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ವಕ್ತಾರ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್.ಎಸ್. ಸುಂದರೇಶ್,
ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಪ್ರಮುಖರಾದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್, ಕಲಗೋಡು
ರತ್ನಾಕರ್, ಜಿ.ಡಿ.ಮಂಜುನಾಥ್, ಚಂದ್ರಭೂಪಾಲ್, ಕಲೀಂ ಪಾಶಾ, ಇಕ್ಕೇರಿ ರಮೇಶ್, ಎನ್.ಡಿ.ಪ್ರವೀಣ್ಕುಮಾರ್, ಜಿ.ಪದ್ಮನಾಭ್, ಶಿ.ಜು.ಪಾಶ, ಪಿ.ಎಸ್.ಗಿರೀಶ್ರಾವ್, ಎಂ.ಟಿ. ದಿನೇಶ್ ಪಾಟೀಲ್, ವೈ.ಹೆಚ್.ನಾಗರಾಜ್ ಸೇರಿದಂತೆ
ಹಲವರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…