ಮುಷ್ಕರದಲ್ಲಿ ಭಾಗವಹಿಸಲು ಅನುಮತಿ ಕೋರಿ ಮನವಿ

0 620

ಹೊಸನಗರ : ಫೆ. 28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆೆ ಕುರಿತು ನಡೆಯುವ ಪಾದಯಾತ್ರೆ ಹಾಗೂ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಲು ಅನುಮತಿ ಕೋರಿ ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ರಶ್ಮಿ ಹಾಲೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರ ಎಂದು ಖಾಯಂಗೊಳಿಸುವುದು, ಸೇವಾ ಭದ್ರತೆ ಕಲ್ಪಿಸುವುದು, ನಿವೃತ್ತಿ ನಂತರ ರೂ ಹತ್ತು ಲಕ್ಷ ಇಡುಗಂಟು ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರದ ಗಮನ ಸೆಳೆಯುವುದು ಈ ಮುಷ್ಕರದ ಮುಖ್ಯ ಉದ್ದೇಶವಾಗಿದೆ.


ಮನವಿ ಸಲ್ಲಿಸುವ ವೇಳೆ ಗ್ರಾಮ ಸಹಾಯಕರ ಸಂಘದ ತಾಲೂಕು ಅಧ್ಯಕ್ಷ ಬಾಳೆಕೊಪ್ಪ ನಾಗಪ್ಪ, ಕಾರ್ಯದರ್ಶಿ ಸುರೇಶ್, ಸದಸ್ಯರಾದ ನಾಗರಾಜ್ ಡಿ, ಅಮ್ಜತ್ ಖಾನ್, ಸುಬ್ರಹ್ಮಣ್ಯ, ಅಶೋಕ ಕೆ.ಎಲ್, ರಾಘವೇಂದ್ರ, ಸೋಮಶೇಖರ, ನಾಗೇಂದ್ರ, ಗಣೇಶ್, ನರಸಿಂಹ ಮೂರ್ತಿ, ಚಂದ್ರಶೇಖರ್ ಇದ್ದರು.

Leave A Reply

Your email address will not be published.

error: Content is protected !!