Categories: Shivamogga

ಮುಷ್ಕರ ಬೆಂಬಲಿಸಲು ರಾಜ್ಯ ಸರ್ಕಾರಿ ನೌಕರರಿಗೆ ಸಿ.ಎಸ್. ಷಡಾಕ್ಷರಿ ಮನವಿ

ಶಿವಮೊಗ್ಗ: 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಪಡೆದು, ಶೇ.40ರಷ್ಟು ವೇತನ ಹೆಚ್ಚಿಸುವ ಬಗ್ಗೆ ಅಧೀಕೃತ ಆದೇಶ ಹೊರಡಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರ ಸಂಘ ನೀಡಿರುವ ಅನಿರ್ಧಿಷ್ಠಾವಧಿ ಮುಷ್ಕರವನ್ನು ಬೆಂಬಲಿಸುವುದರ ಜೊತೆಗೆ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ರಾಜ್ಯ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ.

ಮುಷ್ಕರದ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು ಮೊನ್ನೆ ಬೆಂಗಳೂರಿನಲ್ಲಿ ನಡೆದ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಮಾರ್ಚ್ 01 ರಿಂದ ಆರಂಭಗೊಳ್ಳಲಿರುವ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಹಾಗೂ ಹಂತದ ಅಧಿಕಾರಿ-ಸಿಬ್ಬಂಧಿಗಳು ಸಂಘವು ತೆಗೆದುಕೊಂಡಿರುವ ತೀರ್ಮಾನದಂತೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರದಲ್ಲಿ ಭಾಗಿಯಾಗುವಂತೆ ಅವರು ಕರೆ ನೀಡಿದ್ದಾರೆ.

ಈ ಹಿಂದೆ ಅನೇಕ ಬಾರಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು ಎಂದು ತಿಳಿಸಿರುವ ಅವರು, ಪಂಜಾಬ್, ರಾಜಸ್ತಾನ, ಜಾರ್ಖಂಡ್, ಹಿಮಾಚಲಪ್ರದೇಶ, ಛತ್ತೀಸ್‌ಘಡ ರಾಜ್ಯಗಳ ಮಾದರಿಯಲ್ಲಿ ನೂತನ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಯಥಾವತ್ತಾಗಿ ಜಾರಿಗೊಳಿಸಿ, ನೌಕರರ ಹಿತ ಕಾಪಾಡುವಂತೆ ಮನವಿ ಮಾಡಿರುವುದಾಗಿಯೂ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ನ್ಯಾಯೋಚಿತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಸಂಘವು ಮುಷ್ಕರಕ್ಕೆ ಕರೆ ನೀಡಿದ್ದು, ಸಮಸ್ತ ರಾಜ್ಯ ಸರ್ಕಾರಿ ನೌಕರರು-ಅಧಿಕಾರಿಗಳು ಕರ್ತವ್ಯಕ್ಕೆ ಗೈರುಹಾಜರಾಗಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸುವಂತೆ ಹಾಗೂ ನೌಕರರ ಭವಿಷ್ಯದ ಬದುಕಿಗಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವಂತೆ ಅವರು ನೌಕರರಲ್ಲಿ ಮನವಿ ಮಾಡಿದ್ದಾರೆ.


ರಾಜ್ಯ ಸರ್ಕಾರಿ ನೌಕರರ ಸಂಘವು ಕರೆ ನೀಡಿರುವ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘವು ಬೆಂಬಲಿಸಲಿದೆ. ಅಂತೆಯೇ ರಾಜ್ಯದ ಎಲ್ಲಾ ಪ್ರೌಢಶಾಲೆಗಳ ಶಿಕ್ಷಕರು ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರವನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದೆ.
– ಬಿ.ಸಿದ್ದಬಸಪ್ಪ, ರಾಜ್ಯಾಧ್ಯಕ್ಷರು, ಪ್ರೌಢಶಾಲಾ ಸಹಶಿಕ್ಷಕರ ಸಂಘ, ಬೆಂಗಳೂರು

ನೌಕರರ ನ್ಯಾಯೋಚಿತವಾಗಿರುವ ಬೇಡಿಕೆಯನ್ನು ಈಡೇರಿಸುವಲ್ಲಿ ನಿರ್ಲಕ್ಷ್ಯ ಭಾವ ತಾಳಿರುವ ಹಾಗೂ ಬಜೆಟ್‌ನಲ್ಲಿ ವಿಷಯವನ್ನು ಪ್ರಸ್ತಾಪಿಸದಿರುವುದನ್ನು ಪ್ರತಿಭಟಿಸಿ, ಜಿಲ್ಲಾ ನಿವೃತ್ತ ನೌಕರರ ಸಂಘವು ಮುಷ್ಕರಕ್ಕೆ ಬೆಂಬಲ ಘೋಷಿಸಿದೆ.
– ಚಂದ್ರಶೇಖರಅಧ್ಯಕ್ಷರು, ನಿವೃತ್ತ ನೌಕರರ ಸಂಘ, ಶಿವಮೊಗ್ಗ

“ಸಿಬ್ಬಂದಿಗಳ ಕೊರತೆಯ ನಡುವೆಯೂ ಕೊರೋನ ಸೋಂಕು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದಾಗ್ಯೂ, ಮನೆ, ಕುಟುಂಬ ಎಲ್ಲವನ್ನು ತೊರೆದು ಸೇವೆ ಸಲ್ಲಿಸಿದ ನೌಕರರ ಬೇಡಿಕೆಗೆ ಸ್ಪಂದಿಸದ ಹಾಗೂ ಏಳನೇ ವೇತನ ಆಯೋಗದ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದ ಆಡಳಿತಾರೂಢ ಸರ್ಕಾರಕ್ಕೆ ನೌಕರರ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಬೆಂಬಲಿಸಲಿದೆ.”
– ಪ್ರಭಾಕರ್, ಜಿಲ್ಲಾ ಅಧ್ಯಕ್ಷರು ಆರೋಗ್ಯ ಇಲಾಖೆ ನೌಕರರ ಸಂಘ, ಶಿವಮೊಗ್ಗ.

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

3 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

4 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

4 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

7 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

19 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

20 hours ago