ಸೊರಬ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸೊರಬ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪನವರಿಗೆ (Madhu Bangarappa) ತಾಲೂಕು ಕಂದಾಯ ಇಲಾಖೆ (Revenue Department) ನೌಕರರ ಸಂಘದ ಅಧ್ಯಕ್ಷ ವಿ.ಎಲ್ ಶಿವಪ್ರಸಾದ್ ಒತ್ತಾಯಿಸಿದರು.
ಸೊರಬ (Soraba) ತಾಲೂಕಿನ ರಂಗಮಂದಿರದಲ್ಲಿ ಸಚಿವ ಎಸ್ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿ, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಎಲ್ಲ ಮಹತ್ವಕಾಂಕ್ಷಿಯ ಯೋಜನೆಯನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಕೇಂದ್ರದಲ್ಲಿ ವಸತಿಗೃಹ ಹಾಗೂ ಕಚೇರಿ, ಲ್ಯಾಪ್ಟಾಪ್, ಮೊಬೈಲ್, ಪ್ರಿಂಟರ್, ಮತ್ತು ಅಗತ್ಯವಾಗಿರುವ ಸೌಲಭ್ಯವನ್ನು ಕಲ್ಪಿಸುವ. ಜೊತೆಗೆ ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ 16ಎ ಅನ್ನು ಪುನರ್ ಸ್ಥಾಪಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಎಸ್ ಮಧು ಬಂಗಾರಪ್ಪ, ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಎಸ್ ಮಧು ಬಂಗಾರಪ್ಪನವರಿಗೆ ತಾಲೂಕು ಕಂದಾಯ ಇಲಾಖೆ ನೌಕರರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಯಶವಂತ್, ಕಂದಾಯ ಇಲಾಖೆ ನೌಕರರಾದ ಮಾರುತಿ, ಜಂಗಪ್ಪ ಗೌಡ ಬಿರಾದರ್, ಓಫಿ, ಸಲೀಂ, ವೀರೇಂದ್ರ, ರಾಜೇಶ್ ಬಾಬು, ವಿನಯ್, ಸಮೀರ್, ಮಂಜಪ್ಪ, ಶ್ರೀಶೈಲ್ ಬಗಲಿ, ಸೇರಿದಂತೆ ಕಂದಾಯ ಇಲಾಖೆ ಅನೇಕ ನೌಕರರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…