ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾರ್ಚ್ 31ರ ಬೆಳಗಿನಜಾವ ನಾಯಿಯೊಂದು ನವಜಾತ ಹೆಣ್ಣು ಶಿಶು ಕಚ್ಚಿಕೊಂಡು ಓಡಾಡಿದೆ. ಈ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರು, ಭದ್ರತಾ ಸಿಬ್ಬಂದಿ ನಾಯಿ ಓಡಿಸಿ, ಶಿಶುವನ್ನು ಪರೀಕ್ಷಿಸಿದಾಗ ಅದು ಮೃತಪಟ್ಟಿರುವುದು ಗೊತ್ತಾಗಿದೆ.
ಅಂದು ಆಸ್ಪತ್ರೆಯ ಹೆರಿಗೆ ವಾರ್ಡ್ ಬಳಿ ನಾಯಿ ಶಿಶು ಕಚ್ಚಿಕೊಂಡು ಓಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿ ನಾಯಿ ಓಡಿಸಿ, ಶಿಶುವನ್ನು ಹೆರಿಗೆ ವಾರ್ಡ್ಗೆ ಕೊಂಡೊಯ್ದಿದ್ದಾರೆ. ಅಲ್ಲಿ ಪರೀಕ್ಷಿಸಿದಾಗ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ. ಈ ಬಗ್ಗೆ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಿಶು ನಮ್ಮ ಆಸ್ಪತ್ರೆಯದ್ದಲ್ಲ:
ಬೇರೆ ಯಾವುದೋ ಆಸ್ಪತ್ರೆಯಲ್ಲಿ ಸಾವಿಗೀಡಾದ ಶಿಶುವನ್ನು ತಂದು ನಮ್ಮ ಆಸ್ಪತ್ರೆಯ ಹೆರಿಗೆ ವಾರ್ಡ್ ಹಿಂಭಾಗ ಪ್ಯಾಕ್ ಮಾಡಿ ಎಸೆದು ಹೋಗಿದ್ದಾರೆ. ಅದನ್ನು ನಾಯಿ ಕಚ್ಚಿಕೊಂಡು ಬಂದಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ.ಎಸ್.ಶ್ರೀಧರ್ ಹೇಳಿದ್ದಾರೆ.
ಬಹುಶಃ ಖಾಸಗಿ ನರ್ಸಿಂಗ್ ಹೋಂನವರು ಎಸೆದು ಹೋಗಿರಬಹುದು. ಹೀಗಾಗಿ ಶಿಶುವಿನ ತಂದೆ-ತಾಯಿ ಯಾರು ಎಂಬುದೂ ಗೊತ್ತಾಗಿಲ್ಲ. ಆ ದಿನ ನಮ್ಮ ಹೆರಿಗೆ ವಾರ್ಡ್ನಲ್ಲಿ ಯಾವುದೇ ಮಗು ಸಾವಿಗೀಡಾಗಿಲ್ಲ. ಸತ್ಯಾಸತ್ಯತೆಯನ್ನು ತನಿಖೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದು, ಎಫ್ಐಆರ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…