Categories: Shivamogga

ಮೇ 22 ರಂದು ಕೂಡಲಿ ಶೃಂಗೇರಿ ಮಠದಲ್ಲಿ ನೂತನ ಉತ್ತರಾಧಿಕಾರಿ ಸಮಾರಂಭ

ಶಿವಮೊಗ್ಗ : ಶ್ರೀ ಕ್ಷೇತ್ರ ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮೀಜಿಯವರಿಂದ ದತ್ತರಾಜ ದೇಶಪಾಂಡೆಯವರ ಸನ್ಯಾಸಪೂರ್ವಕ ಶಿಷ್ಯ ಪರಿಗ್ರಹಣ ಸಮಾರಂಭವನ್ನು‌ ಮೇ 18ರಿಂದ ಮೇ 22ರವರೆಗೆ ಕೂಡಲಿಯಲ್ಲಿ ನಡೆಯಲಿದೆ‌ ಎಂದು ಹೆಬ್ಬಳ್ಳಿಯ ದತ್ತಾವಧೂತ ಶ್ರೀಗಳು ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಇಂದು ಸಂಜೆ 5 ಗಂಟೆಗೆ ಉಭಯ ಶ್ರೀಗಳ ಪುರ ಪ್ರವೇಶ
ನಡೆಯಲಿದೆ. ಮೇ 18ರಂದು ಬೆಳಗ್ಗೆ 9ರಿಂದ 12.30ರವರೆಗೆ ಗಣಪತಿ ಪೂಜಾ, ಸಂಕಲ್ಪ, ಕಲಶಸ್ಥಾಪನೆ ಇತ್ಯಾದಿ‌ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 12.30ಕ್ಕೆ ಸಭಾ ಕಾರ್ಯಕ್ರಮ, ಮಹಾನೈವೇದ್ಯ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು.

ಮೇ 1 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ವೇದ ಪಾರಾಯಣ ಹಾಗೂ ದೈವ, ಋಷಿ, ದಿವ್ಯ ಮನುಷ್ಯ
ಶ್ರಾದ್ಧಗಳು ನಡೆಯಲಿವೆ. ಮಧ್ಯಾಹ್ನ 12.30ಕ್ಕೆ ಸಭಾ
ಕಾರ್ಯಕ್ರಮ ನಡೆಯಲಿದೆ. ಮೇ 20ರಂದು ಬೆಳಗ್ಗೆ 9ರಿಂದ ವೇದ ಪಾರಾಯಣ ಹಾಗೂ ಭೂತ, ಪಿತೃ, ಮಾತೃ ಆತ್ಮ ಶ್ರಾದ್ಧಗಳು ನಡೆಯಲಿವೆ ಎಂದರು.

ಮೇ 21ರಂದು ಬೆಳಗ್ಗೆ 9ರಿಂದ ವೇದ ಪಾರಾಯಣ ಹಾಗೂ ಅನುಜ್ಞಾ ಪ್ರಾರ್ಥನೆ, ಪುಣ್ಯಾಹವಾಚನ, ವಪನ ಸಂಕಲ್ಪ, ಮಧ್ಯಾಹ್ನ 12.30ಕ್ಕೆ ಸಭಾ ಕಾರ್ಯಕ್ರಮ, ಸಂಜೆ 5ಕ್ಕೆ ಅಗ್ನಿ ಪ್ರತಿಷ್ಠಾಪನ, ಪೂರ್ಣಾಹುತಿ, ಬ್ರಹ್ಮ ವಿಚಾರ ಹಾಗೂ ರಾತ್ರಿ ಜಾಗರಣೆ ನಡೆಯಲಿದೆ ಎಂದರು.

ಮೇ 22ರಂದು ಬೆಳಗ್ಗೆ 7ರಿಂದ ವಿವಿಧ ಹೋಮ,
ಮಧ್ಯಾಹ್ನ 1 ಕ್ಕೆ ಸಭಾ ಕಾರ್ಯಕ್ರಮ ಹಾಗೂ ಸಂಜೆ
ಉಭಯ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

3 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

5 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

18 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

20 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

21 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

21 hours ago