ರಿಪ್ಪನ್ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪಾದಾರ್ಪಣೆ ಮಾಡಿದರು.
ಸಾಲಾಂಕೃತ ಮೆರವಣಿಗೆಯಲ್ಲಿ ಮುನಿಶ್ರೀಯವರನ್ನು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಪರಂಪರಾಗತವಾಗಿ ಸ್ವಾಗತಿಸಿ, ಭರಮಾಡಿಕೊಂಡರು.
ಜಿನಮಂದಿರಗಳ ದರ್ಶನ ಪಡೆದ ಮುನಿಶ್ರೀಯವರು ವಾರ್ಷಿಕ ರಥಯಾತ್ರಾ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ನೀಡಲಿರುವರು.
ಇಂದ್ರಪ್ರತಿಷ್ಠೆ, ವಿಮಾನಶುದ್ಧಿ, ಯಕ್ಷಪ್ರತಿಷ್ಠೆ, ಧ್ವಜಾರೋಹಣ, ಮಹಾನೈವೇದ್ಯ ಪೂಜೆ, ನಾಂದಿಮಂಗಲ, ವಾಸ್ತುಶಾಂತಿ, ಮೃತ್ತಿಕಾ ಸಂಗ್ರಹ ವಿಧಿಗಳು ಸಾಂಗವಾಗಿ ಆಗಮೋಕ್ತ ಶಾಸ್ತ್ರದಂತೆ ಜರುಗಿದವು.
ರಾತ್ರಿ ನಾಗವಾಹನೋತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಅತಿಶಯ ಶ್ರೀಕ್ಷೇತ್ರದ ರಥೋತ್ಸವವು ಸಮುದಾಯದಲ್ಲಿ ಶಾಂತಿ ಸಾಮರಸ್ಯ ಬೇರೂರಲಿ ಎಂಬ ಸಂದೇಶ ಸಾರುತ್ತದೆ ಎಂದು ಭಕ್ತರನ್ನು ಹರಸಿದರು.
ಪೂಜಾ, ಭೋಜನ ಸೇವಾ ಕರ್ತರಾದ ರಚನಾ ಜೈನ್, ಸಂಜೀವ ಜೈನ್, ಅಶೋಕ ಕಂಪನಿ, ದೆಹಲಿಯವರು ಉಪಸ್ಥಿತರಿದ್ದರು. ಶ್ರೀಮಠದ ಆಡಳಿತಾಧಿಕಾರಿ ಶ್ರೀ ಸಿ.ಡಿ. ಅಶೋಕ ಕುಮಾರ್ ಇದ್ದರು.
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…
ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…