ಶಿವಮೊಗ್ಗ : ಇಲ್ಲಿನ ಹಾಲ್ಕೊಳ ಬಡಾವಣೆಯ ನಿವಾಸಿ, ನಿವೃತ್ತ ಡಿಸಿಎಫ್ ಐ.ಎಂ.ನಾಗರಾಜ್ ಹಾಗೂ ಜಿ.ಜಿ.ನಮಿತಾ ದಂಪತಿ ಪುತ್ರಿ ಐ.ಎನ್.ಮೇಘನಾ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಫಲಿತಾಂಶ ಪ್ರಕಟಿಸಿದೆ. ಮೇಘನಾ ಅಖಿಲ ಭಾರತ ಮಟ್ಟದಲ್ಲಿ 617ನೇ ರ್ಯಾಂಕ್ ಪಡೆದಿದ್ದಾರೆ.
ಮೇಘನಾ ಕಳೆದ ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದರೂ ಸಂದರ್ಶನದಲ್ಲಿ ತೇರ್ಗಡೆ ಆಗಿರಲಿಲ್ಲ. ಈಗ ಎರಡನೇ ಪ್ರಯತ್ನದಲ್ಲಿ ತೇರ್ಗಡೆ ಆಗಿದ್ದಾರೆ. ಮೇಘನಾ ಬೆಂಗಳೂರಿನ ವಿಜಯನಗರದ ಇನ್ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮೈಸೂರು ಜಿಲ್ಲೆ ಬಂಡೀಪುರ ಹಾಗೂ ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದು, ಶಿವಮೊಗ್ಗದ ಸಾಂದೀಪನಿ ಶಾಲೆಯಲ್ಲಿ ಹೈಸ್ಕೂಲ್ ಹಾಗೂ ಪಿಯುಸಿ ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಮುಗಿಸಿದ್ದಾರೆ.
ಮೇಘನಾ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ‘ಮಗಳು ಎಂಜಿನಿಯರಿಂಗ್ ಮುಗಿಸುತ್ತಿದ್ದಂತೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಳು. ಬೆಳಿಗ್ಗೆ 7 ಗಂಟೆಗೆ ಗ್ರಂಥಾಲಯಕ್ಕೆ ಹೋಗಿ ಓದಿನಲ್ಲಿ ತೊಡಗಿಕೊಳ್ಳುತ್ತಿದ್ದಳು. ಈ ಬಾರಿ 1200 ಹುದ್ದೆಗಳು ಇದ್ದು, ಅವಳ ರ್ಯಾಂಕಿಂಗ್ಗೆ ಐಪಿಎಸ್ಗೆ ಅವಕಾಶ ಸಿಗಲಿದೆ’ ಎಂದು ಐ.ಎಂ.ನಾಗರಾಜ್ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…