ಶಿವಮೊಗ್ಗ: ಕಾಯಕವೇ ಕೈಲಾಸ ಎಂಬರ ಶರಣರ ನುಡಿಯೇ ಸಾಧನೆಗೆ ಪ್ರೇರಕ. ನಾವು ಮಾಡುವ ವೃತ್ತಿಯನ್ನು ನಮ್ಮ ಉಸಿರಾಗಿಸಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ಸಾಧಕ ಪ್ರಶಸ್ತಿ ಪುರಸ್ಕೃತ ಕೈಗಾರಿಕೋದ್ಯಮಿ ಬಿ.ಸಿ.ನಂಜುಂಡಶೆಟ್ಟಿ ಹೇಳಿದರು.
ಶಿವಮೊಗ್ಗ ನಗರದ ಶ್ರೀ ಶಿವಗಂಗಾ ಯೋಗ ಕೇಂದ್ರ ವಿಶ್ವಸ್ಥ ಸಮಿತಿಯ ಗೌರವಾಧ್ಯಕ್ಷ ಸಿ.ವಿ.ರುದ್ರಾರಾಧ್ಯ ಕಚೇರಿಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಾಧಿಸುವ ತನಕ ಸಾಮಾಜಿಕ ಸುಖದಿಂದ ದೂರ ಇದ್ದು, ವೃತ್ತಿ ಧರ್ಮವನ್ನು ತಪಸ್ಸಾಗಿ ಅನುಸರಿಸಿ ದೊಡ್ಡ ಕನಸು ಕಾಣಬೇಕು ಎಂದು ತಿಳಿಸಿದರು.
ಬರುವ ನಿಂದನೆ, ಸೋಲುಗಳನ್ನ ಸವಾಲಾಗಿ ಸ್ವೀಕರಿಸಿ ಅವುಗಳನ್ನೇ ನಮ್ಮ ಅಭಿವೃದ್ಧಿಯ ಮೆಟ್ಟಿಲಾಗಿಸಿ ಸದಾ ಧನಾತ್ಮಕವಾಗಿ ಆಲೋಚಿಸಬೇಕು. ಪ್ರತಿ ಸಂದರ್ಭದಲ್ಲಿ ಪ್ರಾಮಾಣಿಕತೆಯಿಂದ ಇರಬೇಕು. ದುಡಿಯುವ ಕಾರ್ಮಿಕರ ಶ್ರಮವನ್ನು ಅರಿತು ಮಾರ್ಗದರ್ಶನ ಮಾಡಿ ಅವರ ಭಾವನೆಗಳಿಗೆ ಸ್ಪಂದಿಸಬೇಕು. ಉದ್ಯಮದಲ್ಲಿರುವ ಶ್ರಮಿಕ ವರ್ಗದವರೆಲ್ಲರೂ ಬಹಳ ಉತ್ತಮರು. ಅವರ ಪ್ರಾಮಾಣಿಕತೆಯಿಂದ ನಾವು ಮತ್ತು ಉದ್ಯಮ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದರು.
ಶಿವಮೊಗ್ಗದ ಕೈಗಾರಿಕಾ ಭೀಷ್ಮರೆನಿಸಿದ್ದ ದಿವಂಗತ ಟಿ.ವಿ.ನಾರಾಯಣ ಶಾಸ್ತ್ರಿ, ಗುಂಡುರಾವ್ ಮತ್ತು ಸಹೋದ್ಯೋಗಿ ದಿವಾಕರ್, ಸುಬ್ರಹ್ಮಣ್ಯ, ಇನಾಮ್ದಾರ್, ವಸಂತ ದಿವೇಕರ್ ಇವರೆಲ್ಲರ ಸಹಕಾರ ನನ್ನ ಯಶಸ್ಸಿಗೆ ಕಾರಣ ಎಂದು ಹೇಳಿದರು.
ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಬಿ.ಸಿ.ನಂಜುಂಡ ಶೆಟ್ಟಿ ಅವರು ಶಿವಮೊಗ್ಗ ನಗರದ ಖ್ಯಾತ ಕೈಗಾರಿಕೋದ್ಯಮಿ, ದಾನಿಗಳು, ಉತ್ತಮ ಆಡಳಿತ ಕೌಶಲ್ಯ ಉಳ್ಳವರು ಆಗಿದ್ದು, ರಾಯಚೂರಿನಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಬೆಂಗಳೂರು ವತಿಯಿಂದ ಕೈಗಾರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕೌಶಲ್ಯದಿಂದಲೇ ಗುರುತಿಸಿಕೊಂಡಿದ್ದಕ್ಕೆ ಕರ್ನಾಟಕ ಸಾಧಕ ಪ್ರಶಸ್ತಿ ಪುರಸ್ಕಾರ ನೀಡಲಾಗಿದೆ. ಇವರ ಸಾಧನೆ ಅಭಿನಂದನೀಯ ಎಂದು ಹೇಳಿದರು.
ವಿಶ್ವಸ್ಥ ಸಮಿತಿಯ ಕಾರ್ಯದರ್ಶಿ ಎಸ್ ಎಸ್ ಜ್ಯೋತಿ ಪ್ರಕಾಶ್, ಸದಸ್ಯರಾದ ಕಲಗೋಡು ರತ್ನಾಕರ್, ಹೊಸತೋಟ ಸೂರ್ಯನಾರಾಯಣ, ಯೋಗ ಕೇಂದ್ರದ ಎಚ್.ಎಮ್. ಚಂದ್ರಶೇಖರಯ್ಯ, ಜಿ.ವಿಜಯಕುಮಾರ್, ಜಿ ಎಸ್ ಓಂಕಾರ, ಜಿ.ಎಸ್. ಜಗದೀಶ್, ಕೈಗಾರಿಕಾ ಉದ್ಯಮಿ ಕೆ.ನಾಗೇಶ್ ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…