ಯೋಚಿಸಿ ನೋಡಿದರೆ ಎಲ್ಲರೂ ನಮ್ಮವರೆ ಚಿಂತಿಸಿ ನೋಡಿದರೆ ಯಾರು ನಮ್ಮವರಲ್ಲ ; ಮಳಲಿ ಶ್ರೀಗಳು


ಹೊಸನಗರ ; ‘ಯೋಚಿಸಿ ನೋಡಿದರೆ ಎಲ್ಲರೂ ನಮ್ಮವರೆ. ಚಿಂತಿಸಿ ನೋಡಿದರೆ ಯಾರು ನಮ್ಮವರಲ್ಲ’ ಎಂದು ಮಳಲಿ ಮಠದ ಶ್ರೀ ಡಾ|| ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.


ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಗ್ರಾಮದ ಶ್ರೀ ಈಶ್ವರ, ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಬೆಂಗಳೂರಿನ ಸುಧಾ, ಮಂಜುನಾಥ ಶೆಟ್ಟಿ ಕುಟುಂಬ ವರ್ಗವು ಸಂಕಲ್ಪದೊಂದಿಗೆ ಹಮ್ಮಿಕೊಂಡಿದ್ದ ಲಕ್ಷದೀಪೋತ್ಸವ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.


‘ಬಂಧುಗಳು ಬಂದುಂಡು ಹೋಗುವರು, ಬಂಧನವ ಕಳವರೇ? ಬಂಧನವ ಕಳೆವ ಸದ್ಗುರಾಯ-ಸರ್ವಜ್ಞ’ ಎಂಬ ಮಾತು ಸತ್ಯವಾದುದು. ಆದ್ದರಿಂದ ಜೀವನದಲ್ಲಿ ಒಂದು ಗುರಿ, ಓರ್ವ ಗುರುವನ್ನು ಪ್ರತಿಯೊಬ್ಬರು ಹೊಂದಿರಬೇಕು. ಕಾರಣ ಬಂಧುಗಳು ನಾವು ಸುಖವಾಗಿದ್ದಾಗ ಎಲ್ಲರೂ ನಮ್ಮವರಾಗಿರುತ್ತಾರೆ. ಶಕ್ತನಾದರೆ ನೆಂಟರೆಲ್ಲರೂ ಹಿತರು. ಅಶಕ್ತನಾದರೆ ನೆಂಟರೆಲ್ಲರೂ ವೈರಿಗಳಾಗುತ್ತಾರೆ. ಆದರೆ, ಸರ್ವಕಾಲದಲ್ಲೂ ಎಲ್ಲರಿಗೂ ಹಿತ ಬಯಸುವ ಶ್ರೀಗುರುವು, ಧರ್ಮ ಪರಂಪರೆ ಉಳಿಸಿ ಬೆಳಸಿಕೊಂಡು ಬರಬೇಕೆಂದು ತಿಳಿಸುವುದರ ಮೂಲಕ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವಿಸಿ ಜೀವನ ಸಾಗಿಸಬೇಕೆಂದು ಅವರು ತಮ್ಮ ಆಶೀರ್ವಚನದಲ್ಲಿ ತಿಳಿಸಿದರು.


ಬೆಳಗ್ಗೆ ಸ್ವಾಮಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ತಮ್ಮ ಬಹುದಿನದ ಇಷ್ಟಾರ್ಥಗಳು ನೆರವೇರಿದ್ದ ಕಾರಣಕ್ಕೆ ಬೆಂಗಳೂರಿನ ಸುಧಾ-ಮಂಜುನಾಥ ಶೆಟ್ಟಿ ಅವರ ಸಂಕಲ್ಪದAತೆ ರಾತ್ರಿ ಶ್ರೀಸ್ವಾಮಿಗೆ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು. ಬಳಿಕ ಶಂಕರ ಬಾಳ್ಕುದ್ರು ಸಾರಥ್ಯದಲ್ಲಿ ಬೆಂಗಳೂರಿನ ಯಕ್ಷ ಸಂಭ್ರಮ (ರಿ) ಹುಳಿಮಾವು ಇವರಿಂದ ‘ಪಂಜುರ್ಲಿ’ ಎಂಬ ಯಕ್ಷಗಾನ ಪ್ರಸಂಗ ನಡೆಯಿತು.

ಸುತ್ತಮುತ್ತಲ ನೂರಾರು ಗ್ರಾಮಸ್ಥರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜಾತ್ಯತೀತವಾಗಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಪ್ರಮುಖರಾದ ಸಂಕಯ್ಯ ಶೆಟ್ರು, ಶೈಲಾ ಮಂಜುನಾಥ ಶೆಟ್ರು, ಸುಶೀಲ ಸುರೇಶ್ ಶೆಟ್ರು, ಗ್ರಾಮ ಪಂಚಾಯತಿ ಸದಸ್ಯರಾದ ಸತೀಶ್, ಸುಬ್ರಹ್ಮಣ್ಯ ಸ್ವಾಮಿರಾವ್, ಮಕ್ಕಳಾದ ಐಶ್ವರ್ಯ, ರೇಷ್ಮ, ರಶ್ಮಿ ಸೇರಿದಂತೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು. ಇದೇ ವೇಳೆ ಚಿತ್ತಾಕರ್ಷಕ ಬಾಣ ಬಿರುಸು ಪಟಾಕಿ ಸಿಡಿಮದ್ದುಗಳ ಪ್ರದರ್ಶನ ನಡೆಯಿತು.


ಸಮಾರಂಭದಲ್ಲಿ ಕು|| ಶಾಮಲ ಪ್ರಾರ್ಥಿಸಿದರು. ಕೊಳಗಿ ಭೋಜರಾಜ ಶೆಟ್ರು ಪ್ರಾಸ್ತಾವಿಕ ಮಾತನಾಡಿದರು. ಕೆ.ಎಲ್. ಗಂಗಾಧರಗೌಡ ನಿರೂಪಿಸಿ, ಸ್ವಾಗತಿಸಿದರು. ನಂತರ ಸುಮಿತ್ರ, ಫಾತಿಮಾ ಅವರಿಂದ ಭಕ್ತಸುಧೆ ಗಾಯಕ ನಡೆಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

17 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

21 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

21 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

23 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago