Categories: ShivamoggaSoraba

ರಕ್ತದಾನದಿಂದ ಯಾವುದೇ ಹಾನಿಯಿಲ್ಲ ; ಸಚಿವ ಮಧು ಬಂಗಾರಪ್ಪ

ಸೊರಬ: ರಕ್ತದಾನದ ಬಗ್ಗೆ ಜನರಿಗೆ ಅನೇಕ ತಪ್ಪು ಕಲ್ಪನೆಗಳಿವೆ. ಇದರಿಂದ ಅನೇಕರು ರಕ್ತದಾನದಿಂದ ಹಿಂದೆ ಸರಿಯುತ್ತಾರೆ. ರಕ್ತದಾನದಿಂದ ಯಾವುದೇ ಹಾನಿಯಿಲ್ಲ, ತಪ್ಪು ಕಲ್ಪನೆಗಳನ್ನು ತೆಗೆದುಹಾಕುವುದರೊಂದಿಗೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದು ಮಹತ್ತರ ಕಾರ್ಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಬುಧವಾರ ತಾಲೂಕಿನ ಉದ್ರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಯುವಕರ ಸಂಘ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಗ್ರಾಮ ಪಂಚಾಯಿತಿ ಉದ್ರಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಾಲ್ಕನೇ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಕ್ತ ಹೀನತೆ, ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳಿಗೆ ರಕ್ತದ ಅಗತ್ಯವಿರುತ್ತದೆ. ಪ್ರತಿನಿತ್ಯ ಜನರು ಒಂದೆಲ್ಲಾ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತದ ಕೊರತೆಯಿಂದ ಸಾಕಷ್ಟು ಜನ ತೊಂದರೆಗೊಳಗಾಗುತ್ತಿದ್ದು, ಯುವಪೀಳಿಗೆ ರಕ್ತದಾನಕ್ಕೆ ಮುಂದಾಗುವುದರೊಂದಿಗೆ ತಮ್ಮ ಆರೋಗ್ಯವನ್ನು ಸುಸ್ತಿಯಲ್ಲಿ ಇಟ್ಟುಕೊಳ್ಳಿ. ರಕ್ತದಾನ ಮಾಡುವುದರಿಂದ ಮನುಷ್ಯನ ಆಯಸ್ಸು ವೃದ್ಧಿಯಾಗುವುದರೊಂದಿಗೆ ಉತ್ತಮ ಆರೋಗ್ಯ, ಚಟುವಟಿಕೆಯಿಂದ ಇರಬಹುದು. ಹೀಗಾಗಿ ಪರೋಪಕಾರದ ಉದ್ದೇಶ ಇಟ್ಟುಕೊಂಡು ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು’ ಎಂದು ಕರೆ ನೀಡಿದರು.

ಆಯುಷ್ ವೈದ್ಯಾಧಿಕಾರಿ ಡಾ|| ಮಹೇಶ್ ಎಂ. ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಬಹುತೇಕ ಜನರಲ್ಲಿ ರಕ್ತ ದಾನದ ಕುರಿತಾಗಿ ವಿವರವಾದ ಮಾಹಿತಿ ಇಲ್ಲ, ಹೀಗಾಗಿ ಹಣ ಕೊಟ್ಟರೆ ಸಿಗುವಂತಹ ವಸ್ತು ಎಂಬ ಭಾವನೆ ಬಹುತೇಕ ಜನರ ಮನಸ್ಸಿನಲ್ಲಿದೆ. ಹಣ ಕೊಟ್ಟ ಪಡೆದ ರಕ್ತವು ಸಹ ಇನ್ನೊಬ್ಬರ ದೇಹದಿಂದ ಬಂದ ದೇಣಿಗೆ ಎಂಬ ಬಗ್ಗೆ ವಿವರವಾದ ಮಾಹಿತಿಗಳು ಸಾರ್ವಜನಿಕರಲ್ಲಿ ರವಾನೆಯಾಗಬೇಕಾಗಿದೆ.

ರಕ್ತದಾನ ಶಿಬಿರಗಳೆಂದರೆ ಪ್ರಚಾರ ಗಿಟ್ಟಿಸಿಕೊಳ್ಳುವಂತಹ ಕಾರ್ಯಕ್ರಮ ಎಂದು ಭಾವಿಸಿಕೊಳ್ಳಬೇಡಿ. ಮನುಷ್ಯನ ಆರೋಗ್ಯದ ಎಲ್ಲ ಸಮಸ್ಯೆಗಳಿಗೆ ವೈದ್ಯರಿಂದಲೇ ಪರಿಹಾರ ಸಿಗುತ್ತದೆ ಎನ್ನುವುದು ತಪ್ಪು. ಮೂತ್ರಪಿಂಡ, ರಕ್ತ. ಕಣ್ಣು ಹೃದಯ ಇನ್ನಿತರ ಭಾಗಗಳನ್ನು ಇನ್ನೊಬ್ಬರ ದೇಹಕ್ಕೆ ವರ್ಗಾವಣೆ ಮಾಡಬಹುದಾಗಿದ್ದು ಅವುಗಳನ್ನು ದಾನರೂಪವಾಗಿ ನೀಡುವುದು ಪುಣ್ಯದ ಕೆಲಸ. ಈ ಕುರಿತು ಸಂಘ ಸಂಸ್ಥೆಗಳ ಸಹಕಾರ ವೈದ್ಯರಿಗೆ ಮತ್ತು ಆಸ್ಪತ್ರೆಗಳಿಗೆ ಅವಶ್ಯವಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಯಾರೇ ಮುಂದಾದರೂ ಸಹ ಅದಕ್ಕೆ ನಮ್ಮ ಸಂಪೂರ್ಣ ಸಹಕಾರ ಲಭಿಸಲಿದೆ. ಇಲ್ಲಿ ನಡೆದ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.


ತಾ.ಪಂ ಇ ಓ ಡಾ|| ಪ್ರದೀಪ್ ಕುಮಾರ್ ಮಾತನಾಡಿ, ನಮ್ಮ ವೈದ್ಯರಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದ್ದು ಪ್ರಶಂಶನೀಯವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷೆ ತಾರ, ಸದಸ್ಯರುಗಳು, ಡಾ|| ಗಂಗಾ ಮುಖ್ಯಸ್ಥರು ರಕ್ತನಿಧಿ
ವೈದ್ಯಾಧಿಕಾರಿಗಳಾದ, ಡಾ|| ಪ್ರಭು ಸಾಹುಕಾರ್, ಮೆಗ್ಗಾನ್ ರಕ್ತ ನಿಧಿ ಕೇಂದ್ರದ ಹನುಮಂತಪ್ಪ ಶಾಲಾ ಶಿಕ್ಷಕ ರಮೇಶ ನಾಯ್ಕ, ನಾಗರಾಜ, ಗ್ರಾಮಸ್ಥರಾದ ಸದಾ ಪಾಟೀಲ್, ಚಾಲುಕ್ಯ ಪಾಟಿಲ್, ತಾರ್ಕೇಶ್ ಗೌಳಿ, ಸತೀಶ್ ಗೌಡ, ದೇಸಾಯಿ ಗೌಡ, ಸುರೇಂದ್ರ ಗೌಡ, ಹನುಮಂತಪ್ಪ, ದರ್ಶನ್ ಪ್ರದೀಪ್, ಮಹೇಶ್ ಗೌಡ, ಪುರುಷೋತ್ತಮ, ಸುರೇಶ, ಶ್ಯಾಮಣ್ಣ ಕ.ರ.ವೇ ಬಲಿಂದ್ರಪ್ಪ ಇತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago