ಶಿವಮೊಗ್ಗ: ರಾಜ್ಯಕ್ಕೆ ಅದೆಷ್ಟು ಬಾರಿ ಪ್ರಧಾನಿ ಮೋದಿ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವೇ ಇಲ್ಲ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥಗೌಡ ಹೇಳಿದರು.
ಪ್ರೆಸ್ ಟ್ರಸ್ಟ್ನ ಪತ್ರಿಕಾ ಭವನದಲ್ಲಿಂದು ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆಗೆ ರಾಜ್ಯದ ಜನ ಬೇಸತ್ತಿದ್ದು, ಬಿಜೆಪಿ ವಿರುದ್ಧ ಸಿಡಿದೇಳುತ್ತಿದ್ದಾರೆ. ಯುವಕರು ನಿರುದ್ಯೋಗ ಸಮಸ್ಯೆಗೆ ಒಳಗಾಗಿ ನಿರಾಶರಾಗಿದ್ದಾರೆ. ಅಡಿಕೆ ಬೆಳೆಗಾರರು ಬಿಜೆಪಿಗೆ ಶಾಪ ಹಾಕುತ್ತಿದ್ದಾರೆ. ಬಗರ್ ಹುಕುಂ ಮತ್ತು ಶರಾವತಿ ಸಂತ್ರಸ್ತರ ಗೋಳನ್ನು ಡಬಲ್ ಇಂಜಿನ್ ಸರ್ಕಾರ ಕೇಳುತ್ತಲೇ ಇಲ್ಲ. ಹೀಗಿರುವಾಗ ನರೇಂದ್ರ ಮೋದಿ ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.
ಡಬಲ್ ಇಂಜಿನ್ ಸರ್ಕಾರ ಕೇವಲ ಭಾವನೆಗಳೊಂದಿಗೆ ಆಟವಾಡುತ್ತಾ ಅದರ ಆಧಾರದಲ್ಲೇ ಮತಗಳನ್ನು ಕೇಳುತ್ತಿದೆ. ಇದು ಹೆಚ್ಚು ದಿನ ನಡೆಯುವುದಿಲ್ಲ. ಸಮಸ್ಯೆಗಳು ದಿನದಿಂದ ದಿನಕ್ಕೆ ಏರುಗತಿಯಲ್ಲಿದೆ ಎಂದರು.
ಕೋವಿಡ್ ನಂತರದಲ್ಲಿ ಸಣ್ಣ ವ್ಯಾಪಾರಿಗಳು ಸೇರಿದಂತೆ ಯುವಕರು ಉದ್ಯೋಗ ಕಳೆದುಕೊಂಡು ಹಳ್ಳಿ ಸೇರಿದ್ದಾರೆ. ಅಲ್ಲಿ ಜೀವನ ಮಾಡಲಾಗದೇ ಹತಾಶರಾಗಿದ್ದಾರೆ. ಗೊಬ್ಬರದ ಬೆಲೆ ನಾಲ್ಕು ಪಟ್ಟು ಹೆಚ್ಚಾಗಿದೆ. ಶರಾವತಿ ಸಂತ್ರಸ್ತರು ಉಸಿರು ಬಿಗಿ ಹಿಡಿದು ಬಾಳುತ್ತಿದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆ, ರಕ್ಷಣಾ ಇಲಾಖೆಗಳಲ್ಲಿ ಹಗರಣಗಳು ಹೆಚ್ಚುತ್ತಾ ಹೋಗುತ್ತಿವೆ. ರಕ್ಷಣೆ ಮಾಡುವವರ ಹತ್ತಿರವೇ ಹಣ ತಿನ್ನುತ್ತಾರೆ ಎಂದರೆ ಎಂಥ ವಿಪರ್ಯಾಸದ ಸಂಗತಿ ಎಂದರು.
ಗೃಹ ಸಚಿವರೂ ಆಗಿದ್ದ ಆರಗ ಜನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಯಾವುದೇ ಕೆಲಸಗಳನ್ನು ಮಾಡಲಾಗಿಲ್ಲ. ಅಡಿಕೆ ಬೆಳೆಗಾರರಿಗೆ ಅವರೇನು ಮಾಡಿದ್ದಾರೆ. ಅಭಿವೃದ್ಧಿಯಂತೂ ಮೊದಲೇ ಇಲ್ಲ. ಹೀಗಿರುವಾಗ ಅವರಿಗೆ ಯುವಕರು ಸೇರಿದಂತೆ ಬಡವರು ವಿವಿಧ ಸಮುದಾಯದವರು ಮತ ಹಾಕಲಾರರು. ಒಂದು ಮತವಾದರೂ ಸರಿಯೇ ಅಲ್ಲಿ ನಾವೇ ಗೆಲ್ಲುತ್ತೇವೆ. ಇದು ಖಚಿತ. ನಮ್ಮ ಗೆಲುವನ್ನು ತಪ್ಪಿಸಲು ಬಿಜೆಪಿ ಮುಖಂಡರಿಗೆ ಸಾಧ್ಯವೇ ಇಲ್ಲ ಎಂದರು.
ಕಾಂಗ್ರೆಸ್ ಕಡೆ ಮತದಾರರು ಆಕರ್ಷಿತರಾಗಿದ್ದಾರೆ. ಬಿಜೆಪಿಯವರಿಗೆ ಕೇಂದ್ರದ ಆಡಳಿತ ಪಕ್ಷದ ಹಾಗೂ ಹಣದ ಬಲವಿರಬಹುದು. ಆದರೆ, ಅದು ಪ್ರಜ್ಞಾವಂತರ ಎದುರು ಕೆಲಸ ಮಾಡುವುದಿಲ್ಲ. ಬಿಜೆಪಿಯ ನೋಟು, ಕಾಂಗ್ರೆಸ್ಗೆ ಓಟು ಎನ್ನುವಂತಹ ಸ್ಥಿತಿ ತೀರ್ಥಹಳ್ಳಿಯಲ್ಲಿ ನಿರ್ಮಾಣವಾಗಿದೆ. ಸುಳ್ಳಿನ ವ್ಯಾಪಾರ ಮಾಡುತ್ತಿರುವ ಬಿಜೆಪಿಗೆ ಯಾರು ಅಪ್ಪಿತಪ್ಪಿಯೂ ಮತ ನೀಡುವುದಿಲ್ಲ. ರಾಷ್ಟ್ರದ ಎಲ್ಲಾ ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಮಾಡಿದರು. ಜಿಲ್ಲೆಯ ಎರಡು ಕಾರ್ಖಾನೆಗಳನ್ನು ಮುಚ್ಚಿ ಹಾಕಿದರು. ಸುಳ್ಳನ್ನೇ ಹತ್ತು ಬಾರಿ ಹೇಳಿ ನಿಜ ಮಾಡಲು ಹೊರಟರು ಎಂದು ದೂರಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ನ ಪ್ರಣಾಳಿಕೆ ಜನ ಸಾಮಾನ್ಯರಿಗೆ ಆಶಾಕಿರಣವಾಗಿದೆ. ನಮ್ಮ ಮುಖಂಡರು ಗ್ಯಾರಂಟಿ ಕಾರ್ಡ್ಗೆ ಸಹಿ ಮಾಡಿಕೊಟ್ಟಿದ್ದಾರೆ. ಇದು ಬಡವರನ್ನು ಖಂಡಿತ ತಲುಪುತ್ತದೆ. ಹಲವರು ಕೇಳುತ್ತಾರೆ, ಎಲ್ಲಾ ಸೌಲಭ್ಯಗಳನ್ನು ನೀಡಿದರೆ ಆಡಳಿತ ನಡೆಸಲು ಹೇಗೆ ಸಾಧ್ಯ ಎಂದು? ಪ್ರಧಾನಿಯವರು ಕೋಟಿಗಟ್ಟಲೇ ಹಣ ದುಂದುವೆಚ್ಛ ಮಾಡುತ್ತಿದ್ದಾರೆ. ಬಂಡವಾಳ ಶಾಹಿಗಳ ಸಾಲವನ್ನೇ ಮನ್ನಾ ಮಾಡಿ, ಬ್ಯಾಂಕ್ ಗಳನ್ನೇ ಮರ್ಜ್ ಮಾಡಿ, ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಆಡಳಿತ ನಡೆಸುತ್ತಿಲ್ಲವೇ? ಎಲ್ಲವನ್ನು ಜಣತನದಿಂದ ಮಾಡಿದರೆ ಬಡವರಿಗೆ ಅನುಕೂಲ ಮಾಡಿಕೊಡಲು ಯಾವುದೇ ಸರ್ಕಾರ ಬಂದರೂ ಸಾಧ್ಯ. ಆದರೆ, ಡಬಲ್ ಇಂಜಿನ್ ಸರ್ಕಾರಕ್ಕೆ ಈ ಬದ್ಧತೆ ಇಲ್ಲ ಎಂದರು.
ಕಿಮ್ಮನೆ ರತ್ನಾಕರ್ ಮತ್ತು ನಿಮ್ಮ ನಡುವೆ ಹೊಂದಾಣಿಕೆ ಸಾಧ್ಯವೇ ಇಲ್ಲ ಎಂದು ವಿಪಕ್ಷದವರು ಹೇಳುತ್ತಿದ್ದರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸಂದರ್ಭಕ್ಕೆ ತಕ್ಕಂತೆ ನಾವಿಬ್ಬರು ವರ್ತಿಸಿದ್ದೇವೆ. ಈಗ ಇಬ್ಬರೂ ಒಟ್ಟಾಗಿದ್ದೇವೆ. ನಾವಿಬ್ಬರು ಒಟ್ಟಾಗಿರುವುದೇ ತೀರ್ಥಹಳ್ಳಿಯ ರಾಜಕಾರಣದ ಒಂದು ತಂತ್ರವಾಗಿದೆ. ನಮ್ಮಿಬ್ಬರ ಸಮ್ಮಿಲನದಿಂದ ವಿರೋಧ ಪಕ್ಷಗಳು ನಡುಗುತ್ತಿವೆ. ನಾನು ಕೆಟ್ಟದ್ದನ್ನು ಬಹು ಬೇಗ ಮರೆತಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನೇ ನಿರೀಕ್ಷೆ ಮಾಡುತ್ತಿದ್ದೇನೆ ಎಂದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್. ಯಡಗೆರೆ ಉಪಸ್ಥಿತರಿದ್ದರು.
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…