Categories: Shivamogga

ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ; ಆಯನೂರು ಮಂಜುನಾಥ್

ಶಿವಮೊಗ್ಗ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲವಿದೆ. ಸುಮಾರು 220 ವಿದಾನಸಭಾ ಕ್ಷೇತ್ರಗಳಲ್ಲಿ ಬರಗಾಲವಿದೆ ಎಂದು ಘೋಷಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕೆ ಸಂಬಂಧಿಸಿಂತೆ ಅಧ್ಯಯನ ನಡೆಸಿದೆ. ಪರಿಹಾರಕ್ಕಾಗಿಯೂ ಸಿದ್ಧವಾಗಿದೆ. ಆದರೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿಲ್ಲವೆಂಬ ಸೇಡಿನ ಹಿನ್ನೆಲೆಯಲ್ಲಿ ನೆರವಿನ ಹಸ್ತ ಚಾಚಿಲ್ಲ. ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನೆರವು ನೀಡಬೇಕಾಗಿದ್ದು ಧರ್ಮವಾಗಿದೆ. ಆದರೆ ಕೇಂದ್ರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 33,700 ಕೋಟಿ ರೂ. ನಷ್ಟ ಉಂಟಾಗಿದೆ. ಕೇಂದ್ರದಿಂದ ಸುಮಾರು 14,500 ಕೋಟಿಯಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಕೇಂದ್ರದ ತಂಡ ರಾಜ್ಯಕ್ಕೆ ಬಂದು ಈಗಾಗಲೇ ಅಧ್ಯಯನ ಕೂಡ ಮಾಡಿದೆ. ವರದಿಯನ್ನು ಕೂಡ ತೆಗೆದುಕೊಂಡು ಹೋಗಿದೆ. ಆದರೂ ಕೂಡ ಯಾವುದೇ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿಲ್ಲ ಎಂದರು.

ರಾಜ್ಯದಿಂದ 25 ಬಿಜೆಪಿ ಸಂಸದರು ಕೇಂದ್ರಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ನಾಲ್ವರು ಸಚಿವರಿದ್ದರೂ ಸಹ ಕೇಂದ್ರದಿಂದ ಹಣ ತರುವಲ್ಲಿ ವಿಫಲರಾಗಿದ್ದಾರೆ. ಎಲ್ಲಾ ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸಬೇಕು ಎಂದರು.

ರಾಜ್ಯ ಬಿಜೆಪಿ ನಾಯಕರು ಬರ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ತಂಡ ಅಧ್ಯಯನ ಮಾಡಿದ್ದರೂ ರಾಜ್ಯ ಬಿಜೆಪಿ ನಾಯಕರ ತಂಡ ಮತ್ತೆ ಅಧ್ಯಯನ ಮಾಡಲು ಹೊರಟಿದೆ. ಈ ನಾಟಕೀಯ ಅಧ್ಯಯನವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಬರ ಬಂದಿರುವುದು ಬಿಜೆಪಿಗೆ ಅವರ ಅಸ್ತಿತ್ವಕ್ಕೆ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ಏನಾಯಿತು? ಇದೇ ಜಿಲ್ಲೆಯಲ್ಲಿ ಸಚಿವರಾಗಿದ್ದವರು ಏನು ಕೊಡುಗೆ ನೀಡಿದ್ದಾರೆ. ಈ ಯೋಜನೆಯಲ್ಲು ಕೂಡ ಸಾಕಷ್ಟು ಭ್ರಷ್ಟಾಚಾರವಾಗಿದೆ. ಕುಡಿಯುವ ನೀರಿಗೆ ತೊಂದರೆ ಆದರೆ ಅದಕ್ಕೆ ಸಂಸದರೇ ಹೊಣೆಯಾಗುತ್ತಾರೆ ಎಂದರು.

ಬಿಎಸ್‌ವೈಗೆ ವಿಶ್ರಾಂತಿ ಕೊಡಿ
ರಾಜ್ಯದಲ್ಲಿ ಬಿಜೆಪಿಗೆ ಅಸ್ತಿತ್ವ ನೀಡಿದ ಬಿ.ಎಸ್.ಯಡಿಯೂರಪ್ಪನವರನ್ನು ಅವರ ಪಕ್ಷ ಕಡೆಗಣಿಸುತ್ತಿದೆ. ಬರ ಅಧ್ಯಯನಕ್ಕೆ ಹಿರಿಯ ಜೀವ ಎಂಬುದನ್ನು ಮರೆತು ಕಳಿಸುತ್ತಿದೆ. ಅಧಿಕಾರದಿಂದ ಇಳಿಸುವಾಗ ಇವರಿಗೆ ಯಡಿಯೂರಪ್ಪನವರ ವಯಸ್ಸು ಗೊತ್ತಿತ್ತು. ಈಗ ರಾಜ್ಯದ ತುಂಬಾ ಓಡಾಡಿಸುತ್ತಿದ್ದಾರೆ. ಈಗ ಅವರಿಗೆ ವಯಸ್ಸಾಗಿಲ್ಲವೇ. ಅವರಿಗೆ ವಿಶ್ರಾಂತಿ ಬೇಡವೇ.
– ಆಯನೂರು ಮಂಜುನಾಥ್, ಕೆಪಿಸಿಸಿ ವಕ್ತಾರ

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಏಸುದಾಸ್, ಜಿ.ಪದ್ಮನಾಭ್, ಶಿ.ಜು. ಪಾಶಾ, ಧೀರರಾಜ್ ಹೊನ್ನವಿಲೆ ಐಡಿಯಲ್ ಗೋಪಿ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago