ಶಿವಮೊಗ್ಗ: ರಾಜ್ಯದ 130 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮಳೆ ಇಲ್ಲದೆ ತೀವ್ರತರ ಬರಗಾಲವಿದೆ. ಸುಮಾರು ಒಂದು ತಿಂಗಳಿಂದ ಸರಿಯಾಗಿ ಮಳೆ ಬಂದಿಲ್ಲ. ಬೆಳೆ ಸಂಪೂರ್ಣ ನಾಶವಾಗಿದೆ. ಈಗ ಮಳೆ ಬಂದರೂ ಬೆಳೆ ಚೇತರಿಸಿಕೊಳ್ಳುವುದಿಲ್ಲ.
ಕಂದಾಯ ಸಚಿವರೇ 120 ತಾಲೂಕುಗಳಲ್ಲಿ ಬರಗಾಲದ ಛಾಯೆ ಇದೆ ಎಂದು ಹೇಳಿದ್ದಾರೆ. ಆದ್ದರಿಂದ ಸರ್ಕಾರ 130 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಪರಿಹಾರ ರೂಪವಾಗಿ ಎಕರೆಗೆ 25 ಸಾವಿರ ನೀಡಬೇಕು. ಫಸಲ್ ವಿಮಾ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ರೈತರ ಐಪಿ ಸೆಟ್ಗಳಿಗೆ ಹಗಲು ಹೊತ್ತು ಕನಿಷ್ಠ 10 ಗಂಟೆಗಳ ಸಮರ್ಪಕ ವಿದ್ಯುತ್ ನೀಡಬೇಕು. ಐಪಿ ಸೆಟ್ಗಳಿಗೆ ಆಧಾರ್ ಕಾರ್ಡ್ ಜೋಡಣೆಗ ಒತ್ತಾಯಿಸಬಾರದು. ಇದರ ಹಿಂದೆ ಖಾಸಗೀಕರಣದ ಹುನ್ನಾರ ಅಡಗಿದೆ. ಆಧಾರ್ ಕಾರ್ಡ್ ಜೋಡಣೆ ಮಾಡಿದರೆ ಮುಂದೆ ಮೊಬೈಲ್ಗಳಿಗೆ ಕರೆನ್ಸಿ ಹಾಕಿಸಿಕೊಂಡು ಉಪಯೋಗಿಸುವ ರೀತಿಯಲ್ಲಿ ಬಳಸಬೇಕಾಗುತ್ತದೆ ಎಂದು ದೂರಿದರು.
ಅ.2 ರಂದು ತೆಂಗು ಬೆಳೆಗಾರರನ್ನು ಬೆಂಬಲಿಸಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರೈತರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಎಸ್. ಶಿವಮೂರ್ತಿ, ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಕೆ. ರಾಘವೇಂದ್ರ, ಪಿ.ಡಿ.ಮಂಜಪ್ಪ ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…