ಶಿವಮೊಗ್ಗ : ರಾಜ್ಯ ವಿದ್ಯುತ್ ಅಭಾವ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಇಲ್ಲವಾಗಿದೆ. ಇಂತಹ ಕಠಿಣ ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಅಕ್ಕಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ನಿವಾರಣೆಗಾಗಿ ಡಿಸೆಂಬರ್ ಒಳಗಾಗಿ 100 ಟವರ್ ನಿರ್ಮಿಸಲಾಗುವುದು. ಈಗಾಗಲೇ ಕೇಂದ್ರ ಸರ್ಕಾರ ಇದಕ್ಕಾಗಿ 300 ಕೋಟಿ ರೂ. ನೀಡಿದೆ. ಶಿವಮೊಗ್ಗ ಕ್ಷೇತ್ರದ ಟವರ್ಗಳಿಗೆ 100 ಬ್ಯಾಟರಿ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ಟವರ್ ನಿರ್ಮಿಸಲಾಗುವುದು ಎಂದರು.
ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಕ್ಷೇತ್ರಕ್ಕಾಗಿ ಏತ ನೀರಾವರಿ ಯೋಜನೆಯನ್ನು ತಂದಿದ್ದರು. ಶಿಕಾರಿಪುರ ತಾಲೂಕಿನಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ನಿರಂತರ ವಿದ್ಯುತ್ ಪೂರೈಸಿದರೆ ಹಲವು ಕೆರೆಗಳಿಗೆ ನೀರು ತುಂಬಿಸಬಹುದು ಎಂದ ಅವರು, ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಆರಂಭಿಸಿತ್ತು. ಆದರೆ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಪ್ರತ್ಯೇಕ ಶಿಕ್ಷಣ ನೀತಿ ಅಳವಡಿಸುತ್ತಿದೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ಮಕ್ಕಳು ತೊಂದರೆಗೊಳಗಾಗುತ್ತಾರೆ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…