ರಾಷ್ಟ್ರಕವಿ ಕುವೆಂಪು ಅವರ ಬದುಕು, ಬರಹ ಯುವ ಸಮೂಹಕ್ಕೆ ಸ್ಫೂರ್ತಿ ; ಡಾ. ಕೆ.ಸಿ. ಶಶಿಧರ್

ಹೊಸನಗರ ; ರಾಷ್ಟ್ರಕವಿ ಕುವೆಂಪು ಅವರ ಬದುಕು, ಬರಹ ನಮ್ಮ ಯುವಜನತೆಗೆ ಸ್ಪೂರ್ತಿ ಆಗಲಿ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ಮಹಾವಿದ್ಯಾಲಯದ ಕುಲಸಚಿವ, ವಿಶೇಷ ಅಧಿಕಾರಿ ಡಾ. ಕೆ.ಸಿ.ಶಶಿಧರ್ ಆಶಿಸಿದರು.

ಕುವೆಂಪು ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿ.ವಿ ಆವರಣದಲ್ಲಿ ಸೊಗಡು ಸಾಹಿತ್ಯ ವೇದಿಕೆ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಅಂಗವಾಗಿ ಪ್ರಥಮ ವರ್ಷದ ಕೃಷಿ ಪದವಿ ವಿದ್ಯಾರ್ಥಿ ಚಂದನ್ ರಚಿಸಿದ್ದ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಟ ಸರ್ಮಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿ, ಕುವೆಂಪು ಅವರ ಬದುಕು, ಬರಹ ಒಂದೇ ಆಗಿದ್ದು, ನುಡಿದಂತೆ ನಡೆದು ಬದುಕು ಸಾಗಿಸಿದ ಮಹಾತ್ಮರು. ಅವರ ಬದುಜಿನ ಆದರ್ಶಗಳು, ಮಾನವೀಯ ಮೌಲ್ಯಗಳು ಯುವಸಮೂಹಕ್ಕೆ ಅನುಕರಣೀಯವಾಗಿದ್ದು ಸಾಧಕರಿಗೆ ಮಾದರಿಯಾಗಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸೊಗಡು ಸಾಹಿತ್ಯ ವೇದಿಕೆಯ ಸಂಯೋಜಕಿ ಡಾ. ಶಶಿಕಲಾ ಮಾತನಾಡಿ, ಕುವೆಂಪು ಅವರ ಕನ್ನಡ ಭಾಷಾ ಪ್ರೇಮ, ಪ್ರಕೃತಿ ಪ್ರೇಮ ಹಾಗೂ ಮಾನವೀಯ ಗುಣಗಳನ್ನು ನಾವುಗಳು ಅಳವಡಿಸಿಕೊಂಡಲ್ಲಿ ಮಾತ್ರವೇ ವಿಶ್ವಮಾನವ ದಿನಾಚರಣೆ ಅರ್ಥಪೂರ್ಣವಾಗುತ್ತದೆ. ಕುವೆಂಪು ಓರ್ವ ವ್ಯಕ್ತಿ ಆಗಿರದೆ, ಇಡೀ ಕರುನಾಡಿನ ಸಾಹಿತ್ಯ ಕ್ಷೇತ್ರದ ಶಕ್ತಿಯಾಗಿದ್ದವರು. ಅಂತಹ ವಿಶ್ವಚೇತನ ನಮ್ಮ ಜಿಲ್ಲೆಯವರು ಎಂಬುದೇ ನಮ್ಮೆಲ್ಲರ ಸೌಭಾಗ್ಯದ ಸಂಗತಿ ಎಂದರು.

ಕುವೆಂಪು ಕುರಿತಾಗಿ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಣೆ, ಅವರ ರಚನೆಯ ಕೆಲವು ಗೀತೆಗಳನ್ನು ಇದೇ ಸಂದರ್ಭದಲ್ಲಿ ಹಾಡುವ ಮೂಲಕ ರಸಋಷಿಗೆ ನುಡಿನಮನ ಸಲ್ಲಿಸಲಾಯಿತು. ಹಸೆ ಚಿತ್ತಾರ ಪರಿಷತ್ತಿನ ರವಿರಾಜ ಅವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ರಚಿಸಿದ್ದ, ಸಾಂಪ್ರದಾಯಕ ಕೆಲವು ಹಸೆ ಚಿತ್ತಾರಗಳ ಪ್ರದರ್ಶನ ವಿಶೇಷವಾಗಿ ಕಾರ್ಯಕ್ರಮದಲ್ಲಿ ಗಮನ ಸೆಳೆಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago