ರಿಪ್ಪನ್ಪೇಟೆ : ಇತ್ತೀಚೆಗೆ ಉಡುಪಿಯಲ್ಲಿ (Udupi) ನಡೆದ ಆಲ್ ಇಂಡಿಯಾ ಅಂತರ ವಿಶ್ವವಿದ್ಯಾನಿಲಯದ ಖೇಲೋ ಕಬ್ಬಡಿ ಪಂದ್ಯಾವಳಿಯಲ್ಲಿ ಆ ಪ್ರತಿಮಾ ಸಾಧನೆ ತೋರಿ ಚಿನ್ನದ ಪದಕವನ್ನು (Gold Medal) ಗೆದ್ದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಹಾಗೂ ತವರೂರು ರಿಪ್ಪನ್ಪೇಟೆಯ (Ripponpet) ಕೀರ್ತಿ ಪತಾಕೆಯನ್ನು ವಿದ್ಯಾರ್ಥಿ ಪ್ರಜ್ವಲ್ ಎಸ್ ಹಾರಿಸಿದ್ದಾರೆ.
ಈತ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದು, ಆ ವಿಶ್ವವಿದ್ಯಾನಿಲಯಕ್ಕೆ 33 ವರ್ಷಗಳ ನಂತರ ಚಿನ್ನದ ಪದಕವನ್ನು ತಂದು ಕೊಟ್ಟಿದ್ದಾರೆ.
ಪ್ರಜ್ವಲ್ ಕ್ರೀಡೆಯಲ್ಲಿ ತೋರಿಸಿರುವ ಅಪ್ರತಿಮ ಸಾಧನೆಯಿಂದ ಖೇಲೋ ಆಲ್ ಇಂಡಿಯಾ ಯೂತ್ ಗೇಮ್ಸ್ ಗೆ ಆಯ್ಕೆಯಾಗಿದ್ದು, ಅಲ್ಲಿಯೂ ಸಹ ಇನ್ನು ಹೆಚ್ಚಿನ ಸಾಧನೆ ಮಾಡಲಿ ಎಂದು ರಿಪ್ಪನ್ಪೇಟೆಯ ಕ್ರೀಡಾಭಿಮಾನಿಗಳು ವಿವಿಧ ಸಂಘ-ಸಂಸ್ಥೆಗಳು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.
ಪ್ರಜ್ವಲ್ ರಿಪ್ಪನ್ಪೇಟೆಯ ಶ್ರೀಧರ್ ಹಾಗೂ ಶುಭ ಶ್ರೀಧರ್ ದಂಪತಿಗಳ ಪುತ್ರ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…