ಹೊಸನಗರ: ಆನಂದಪುರ ಸಮೀಪದ ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಯಲದ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳ ತಂಡ ಹೊಸನಗರ ತಾಲೂಕಿನ ಮಾರುತಿಪುರ, ಕೋಡೂರು, ಯಳಗಲ್ಲು ಚಿಕ್ಕಜೇನಿ, ಹಿರೇಜೇನಿ ಹಾಗೂ ಗವಟೂರು ಗ್ರಾಮಗಳಲ್ಲಿ ಶನಿವಾರ ತಮ್ಮದೇ ವಿಶಿಷ್ಟ ರೀತಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಿತು.
ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿ ವಿವಿಧ ರೈತಸ್ನೇಹಿ ಕಾರ್ಯಕ್ರಮಗಳು ಜರುಗಿದವು. ಮಾರುತಿಪುರಕ್ಕೆ ನವಗ್ರಹ, ಚಿಕ್ಕಜೇನಿ ಗ್ರಾಮಕ್ಕೆ ಸಿಹಿಜೇನು, ಗವಟೂರಿಗೆ ಚಿಗುರು, ಯಳಗಲ್ಲು ಗ್ರಾಮಕ್ಕೆ ಸಹ್ಯಾದ್ರಿ, ಕೋಡೂರಿಗೆ ಗಂಧದಗುಡಿ ತಂಡದ ವಿದ್ಯಾರ್ಥಿಗಳು ಗ್ರಾಮದ ರೈತರ ಪ್ರತಿ ಮನೆಗೆ ಭೇಟಿ ನೀಡಿ ಹಣ್ಣು-ಹಂಪಲ ಸಹಿತ ತಾಂಬೂಲ ನೀಡಿ ರೈತ ದಿನಾಚರಣೆಯ ಶುಭಕೋರಿದರು.
ಸಂಜೆ ಮಾರುತಿಪುರ ಗ್ರಾಮಪಂಚಾಯತಿ ಆವರಣದಲ್ಲಿ ನಡೆದ ರೈತ ನಮನ ಕಾರ್ಯಕ್ರಮದಲ್ಲಿ ಅನ್ನದಾತನಿಗೆ ಸಾಮೂಹಿಕ ನಮನ ಸಲ್ಲಿಸಿದರು.
ಗ್ರಾ.ಪಂ.ಉಪಾಧ್ಯಕ್ಷ ಶಂಕರಶೆಟ್ಟಿ ರೈತ ದಿನದ ಮಹತ್ವ ವಿವರಿಸಿದರು. ಸದಸ್ಯರಾದ ಇಂದ್ರೇಶ್, ಚಂದ್ರಪ್ಪ ಸೇರಿದಂತೆ ಹತ್ತಾರು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುದ್ದೇಶ ತಿಳಿಸಿಕೊಟ್ಟರೆ, ಹಾಜರಿದ್ದ ಹಲವಾರು ಗ್ರಾಮಸ್ಥರು ತಮ್ಮ ಮನದಾಳದ ಮಾತುಗಳನ್ನು ವಿನಿಮಯ ಮಾಡಿಕೊಂಡರು.
ಮಾಜಿ ಪ್ರಧಾನಿ ಚೌಧರಿ ಚರಣ್ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರೈತ ಪದಕ್ಕೆ ದೀಪಾಲಕಾರ ಮಾಡಿ, ರೈತಗೀತೆ ಹಾಡಿನ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಈ ವೇಳೆ ಕೋಡೂರು ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮಾತನಾಡಿ, ಅತಿವೃಷ್ಠಿ, ಅನಾವೃಷ್ಠಿ ಮಲೆನಾಡು ಭಾಗದಲ್ಲಿ ಹೆಚ್ಚುತ್ತಿದ್ದು, ಕೃಷಿ ವಿವಿ ಸಮಸ್ಯೆಗಳನ್ನು ಅವಲೋಕಿಸಿ ಸಲಹೆ ನೀಡುತ್ತಿದ್ದೆ. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನ ಆವಿಷ್ಕಾರಿಸಿ ಕೃಷಿಯಲ್ಲಿ ಹೊಸ ಕ್ರಾಂತಿ ತರಬೇಕೆಂದರು.
ಇದೇ ವೇಳೆ ರೈತರಿಗೆ ಮ್ಯೂಸಿಕಲ್ ಚೇರ್ ಸೇರಿದಂತೆ ವಿವಿಧ ಆಟೋಟ ಸ್ಪಧೆಗಳನ್ನು ಏರ್ಪಡಿಸಲಾಗಿತ್ತು. ಅಲ್ಲದೆ ‘ಜೂ ಜವಾಜ್-ಜೈ ಕಿಸಾನ್’ ಘೋಷವಾಕ್ಯದೊಂದಿಗೆ ಆಗಲಿದ ರೈತರಿಗೆ ನುಡಿನಮನ ಸಲ್ಲಿಸಲಾಯಿತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…