Categories: Shivamogga

ರಾಷ್ಟ್ರ ದ್ರೋಹಿಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡಬಾರದು ; ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ರಾಷ್ಟ್ರ ದ್ರೋಹದ ಕೆಲಸಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡಬಾರದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.


ಅವರು ಗುರುವಾರ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ಇತ್ತೀಚಿನ ರಾಗಿಗುಡ್ಡದ ಘಟನೆಗೆ ಸಂಬಂಧಿಸಿದಂತೆ ಸಾಂತ್ವನ ಹೇಳಲು ಬಂದ ಹಿಂದೂ ನಾಯಕನನ್ನು ಬಂಧಿಸುತ್ತಾರೆ. ಇದು ನೀಚ ಕೃತ್ಯ ಅಲ್ಲವೇ. ಮೈಸೂರು ದಸರಾವನ್ನು ಇಡೀ ದೇಶವೇ ನೋಡುತ್ತದೆ. ಇಂತಹ ದಸರಾಕ್ಕೆ ಪರ್ಯಾಯವಾಗಿ ಆಚರಿಸುವ ಮಹಿಷ ದಸರಾಕ್ಕೆ ಅನುಮತಿ ಕೊಡುತ್ತಾರೆ. ಯಾರನ್ನು ಪೂಜೆ ಮಾಡಬೇಕು ಎಂಬುದೇ ಗೊತ್ತಿಲ್ಲ ಎಂದರು.


ಇಸ್ರೇಲ್ ಮತ್ತು ಪ್ಯಾಲಸ್ತೇನ್ ಯುದ್ಧ ನಡೆಯುತ್ತಿದೆ. ಭಾರತ ಇಸ್ರೇಲ್ ಪರವಾಗಿ ನಿಂತಿದೆ. ಆದರೆ ಬೆಂಗಳೂರಿನಂತಹ ನಗರದಲ್ಲಿ ಭಯೋತ್ಪಾದಕರ ಪರವಾಗಿ ಪ್ರತಿಭಟನೆ ಮಾಡುವವರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತದೆ. ಇದು ದೇಶ ದ್ರೋಹದ ಕೆಲಸವಲ್ಲವೇ. ಭಯೊತ್ಪಾದಕರು ಅಲ್ಲಿ ಆಸ್ಪತ್ರೆಗಳಿಗೇ ರಾಕೆಟ್ ಉಡಾಯಿಸಿ ಕೊಲ್ಲುವಷ್ಟು ನೀಚರಾಗಿದ್ದಾರೆ. ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಲಿ ತೆಗೆದುಕೊಂಡಿದ್ದು ಇದೇ ಭಯೋತ್ಪಾದಕರಲ್ಲವೇ. ಕಾಂಗ್ರೆಸ್ಸಿಗರಿಗೆ ಇದೇಕೆ ಅರ್ಥವಾಗುತ್ತಿಲ್ಲ. ಭಯೋತ್ಪಾದಕರ ಪರವಾಗಿ ಇರುವವನ್ನು ಹೆಡೆಮುರಿ ಕಟ್ಟಬೇಕಲ್ಲವೇ. ಇನ್ನೂ ಎಷ್ಟು ದಿನ ವೋಟ್ ಬ್ಯಾಂಕ್ ರಾಜಕಾರಣ ಕಾಂಗ್ರೆಸ್ ಮಾಡುತ್ತದೆ. ಇದನ್ನು ಬಿಜೆಪಿ ಸಹಿಸಿಕೊಳ್ಳುವುದಿಲ್ಲ ಎಂದ ಅವರು, ಬಹುತ್ವ ಕರ್ನಾಟಕ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದರು.
ಬಾಯಿಗೆ ಬಂದಂತೆ ಮಾತನಾಡುವ ಪ್ರೊ. ಭಗವಾನ್ ಎಲ್ಲಿಗೆ ಬೇಕಾದರೂ ಹೋಗಬಹುದು. ಆದರೆ ಸಾಂತ್ವನ ಹೇಳಲು ಮುತಾಲಿಕ್ ಬರಬಾರದೇ. ಯಾರನ್ನು ಗಡಿಪಾರು ಮಾಡಬೇಕು, ಯಾರು ರಾಷ್ಟ್ರ ದ್ರೋಹಿಗಳು, ಯಾರು ರಾಷ್ಟ್ರಭಕ್ತರು, ಯಾವುದು ದಸರಾ ಹಬ್ಬ ಈ ಕಲ್ಪನೆ ರಾಜ್ಯ ಸರ್ಕಾರಕ್ಕೆ ಇದೆಯೇ? ಎಂದು ಪ್ರಶ್ನೆ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರಾಧ್ಯಕ್ಷ ಜಗದೀಶ್, ಪಾಲಿಕೆ ಸದಸ್ಯ ಜ್ಞಾನೇಶ್ವರ್, ಬಾಲು, ಶಶಿಧರ್, ಅಣ್ಣಪ್ಪ ಕೆ.ವಿ. ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago