ರಿಪ್ಪನ್‌ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಸಡಗರ ಸಂಭ್ರಮದಿಂದ ಕ್ರಿಸ್‌ಮಸ್ ಆಚರಣೆ

ರಿಪ್ಪನ್‌ಪೇಟೆ : ಬೈಬಲ್‌ನಲ್ಲಿ ಉಲ್ಲೇಖಿಸಿರುವಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಬೋಧನೆಗಳಲ್ಲಿ ಒಂದಾಗಿದೆ. ಎಂದು ಪಟ್ಟಣದ ಗುಡ್ ಶಫರ್ಡ್ ಚರ್ಚ್ ನ ಧರ್ಮ ಗುರು ರೆ. ಫಾ. ಬಿನೋಯ್ ಹೇಳಿದರು.

ಉದಾಹರಣೆಗೆ ಬೈಬಲ್ ನಯೋಹಾನ್ 13:34-35 ನಲ್ಲಿ ಹೇಳಿದಂತೆ: “ನಾನು ನಿಮಗೆ ಹೊಸ ಆಜ್ಞೆಯನ್ನು ನೀಡುತ್ತೇನೆ. ಒಬ್ಬರನ್ನೊಬ್ಬರು ಪ್ರೀತಿಸಿ. ನಾನು ನಿಮ್ಮನ್ನು ಪ್ರೀತಿಸಿದಂತೆ, ನೀವು ಮಾಡಬೇಕು. ಒಬ್ಬರನ್ನೊಬ್ಬರು ಪ್ರೀತಿಸಿ, ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ ನೀವು ನನ್ನ ಶಿಷ್ಯರೆಂದು ಎಲ್ಲರೂ ತಿಳಿಯುವರು” ಎಂದು.

ಮ್ಯಾಥ್ಯೂ 5-7 ರಲ್ಲಿ ಮಾತನಾಡಿದ ಧರ್ಮೋಪದೇಶವು ನಮ್ರತೆ, ಕರುಣೆ ಮತ್ತು ಸದಾಚಾರದ ಕುರಿತು ಪ್ರಮುಖ ಬೋಧನೆಗಳನ್ನು ಒಳಗೊಂಡಿದೆ. ಒಟ್ಟಾರೆಯಾಗಿ ಸಂದೇಶವನ್ನು ಸಾಮಾನ್ಯವಾಗಿ ಗೋಲ್ಡನ್ ರೂಲ್ ಎಂದು ಸಂಕ್ಷೇಪಿಸಲಾಗಿದೆ.

“ಇತರರು ನಿಮಗೆ ಹೇಗೆ ಮಾಡಬೇಕೆಂದು ನೀವು ಬಯಸುತ್ತೀರೋ ಅದನ್ನು ಮಾಡಿ” (ಮ್ಯಾಥ್ಯೂ 7:12).

ಕ್ರಿಸ್ ಮಸ್ ದಿನದ ಶುಭಾಶಯಗಳು
ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ : ರೆ. ಫಾ. ಬಿನೋಯ್.
ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್‌ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.

ಪಟ್ಟಣದ ಗುಡ್ ಶಫರ್ಡ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಅವರು ಬೈಬಲ್ ನ ಯೋಹಾನ್ ಹೇಳಿದಂತೆ: “ನಾನು ನಿಮಗೆ ಹೊಸ ಆಜ್ಞೆಯನ್ನು ನೀಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿ. ನಾನು ನಿಮ್ಮನ್ನು ಪ್ರೀತಿಸಿದಂತೆ, ನೀವು ಮಾಡಬೇಕು. ಒಬ್ಬರನ್ನೊಬ್ಬರು ಪ್ರೀತಿಸಿ, ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ ನೀವು ನನ್ನ ಶಿಷ್ಯರೆಂದು ಎಲ್ಲರೂ ತಿಳಿಯುವರು..” ಧರ್ಮೋಪದೇಶವು ನಮ್ರತೆ, ಕರುಣೆ ಮತ್ತು ಸದಾಚಾರದ ಕುರಿತು ಪ್ರಮುಖ ಬೋಧನೆಗಳನ್ನು ಒಳಗೊಂಡಿದೆ.

“ಇತರರು ನಿಮಗೆ ಹೇಗೆ ಮಾಡಬೇಕೆಂದು ನೀವು ಬಯಸುತ್ತೀರೋ ಅದನ್ನು ಮಾಡಿ”. ಕ್ರಿಸ್‌ಮಸ್ ಹಬ್ಬವು ಕ್ರೈಸ್ತ ಬಾಂಧವರ ಪವಿತ್ರ ಹಬ್ಬವಾಗಿದೆ , ಈ ಹಬ್ಬವು ಜಗತ್ತು ಕಂಡ ದಾರ್ಶನಿಕ ಪ್ರವಾದಿ ಶಾಂತಿ ನೆಮ್ಮದಿಯಿಂದ ಸೇವೆಯ ಮೂಲಕ ಬದುಕು ಕಟ್ಟಿಕೊಳ್ಳಬಹುದು ಎಂದು ಸಾರಿದ ಯೇಸು ಕ್ರಿಸ್ತನ ಹುಟ್ಟುಹಬ್ಬ ವಾಗಿದೆ. ಪ್ರತಿಯೊಬ್ಬ ಕ್ರೈಸ್ತ ಬಾಂಧವರು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರೂ ಬೆರೆತು ಉತ್ತಮ ಪ್ರಜೆಗಳಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಪ್ರೀತಿ ವಿಶ್ವಾಸ ಹಾಗೂ ನಂಬಿಕೆಯ ಮೂಲಕ ಗೌರವವನ್ನು ನೀಡುವುದು ಪ್ರತಿಯೊಬ್ಬ ಕ್ರೈಸ್ತರ ಕರ್ತವ್ಯವಾಗಿರಬೇಕು ಎಂದರು.

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ ಹಾಗು ಜಿಲ್ಲೆಯ ವಿವಿಧಡೆಗಳಿಂದ ಆಗಮಿಸಿದ ಕ್ರೈಸ್ತ ಬಾಂಧವರ ಜೊತೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಬಂಧುಗಳು ಸಹ ಭಾಗಿಯಾಗಿ ಕ್ರಿಸ್‌ಮಸ್ ಕೇಕ್ ಅನ್ನು ಹಂಚುವುದರ ಮೂಲಕ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳು ಕೋರಿದರು.

ಗುಡ್ ಶಫರ್ಡ್ ಚರ್ಚಿನ ವತಿಯಿಂದ ಕ್ರಿಸ್‌ಮಸ್ ಹಬ್ಬದ ಆಚರಣೆಯ ಸಂಭ್ರಮದಲ್ಲಿ ಭಾಗವಹಿಸಿದ ಎಲ್ಲಾ ಭಕ್ತಾದಿಗಳಿಗೆ ಕೇಕ್ ಹಂಚುವುದರ ಮೂಲಕ ಶುಭ ಕೋರಿದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

59 mins ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

2 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

6 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

23 hours ago